top of page
News Articles
Sathyapatha News Plus


ಸುಳ್ಯ: ವಿವಾಹಿತೆ ಅನುಮಾನಾಸ್ಪದ ಸಾವು; ಅತ್ತೆ, ಮಾವನ ವಿರುದ್ಧ ಕೊಲೆ ಆರೋಪ
ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ ಪುತ್ತೂರು ಕೆದಂಬಾಡಿಯ ಫಾತಿಮತ್ ನಿಶಾನ ಎಂಬುವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಜುಲೈ 18ರ ರಾತ್ರಿ ತಾಯಿಗೆ ಕರೆ ಮಾಡಿದ್ದ ನಿಶಾನಾ, ತನಗೆ ಗಂಡನ ಮನೆಯವರು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿರುವುದಾಗಿ ತಿಳಿಸಿದ್ದರು. ಇದೇ ವೇಳೆ ಫೋನ್ ಕಸಿದುಕೊಂಡ ಮಾವ ಅಲವಿ, ಆಕೆಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರೆಂದು ಆರೋಪಿಸಲಾಗಿದೆ. ಪೋಷಕರು ಸ್ಥಳಕ್ಕೆ ತೆರಳುವಷ್ಟರಲ್ಲಿ ನಿಶಾನಾ ಮೃತಪಟ್ಟಿದ್ದರು. ಕೌಟುಂಬಿಕ ಕಿರುಕುಳ ಹಾಗೂ ಹತ್ಯೆ ಆರೋಪದಡಿ ಮೃತರ ಮಾವ ಅಲವಿ, ಅತ್ತೆ ಆಯಿಷ ಮತ್ತು ನಾದಿನಿ ಫಸೀಲಾ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ (
Jul 211 min read


ಬಿಸಿ ರೋಡ್ನಲ್ಲಿ ಯುವತಿಯ ಭೀಕರ ಕೊಲೆ: ಏಕಪಕ್ಷೀಯ ಪ್ರೀತಿಗೆ ಯುವತಿ ಬಲಿ!!
ಬಂಟ್ವಾಳದ ಬಿಸಿ ರೋಡ್ನ ನೂತನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ಭೀಕರ ಘಟನೆಯೊಂದು ನಡೆದಿದೆ. ಬಸ್ಗಾಗಿ ಕಾಯುತ್ತಿದ್ದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ತಕ್ಷಣವೇ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಕೊನೆಯುಸಿರೆಳೆದಿದ್ದಾಳೆ. ಮೃತ ಯುವತಿಯನ್ನು ಕಕ್ಕೆಪದವು ನಿವಾಸಿ ಲಾವಣ್ಯ ಗೌಡ (21) ಎಂದು ಗುರುತಿಸಲಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಕೃತ್ಯ ಎಸಗಿದ ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದ್ದು, ಈತ ಯುವತಿಯ
Jul 161 min read


ಬಂಟ್ವಾಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಯುವತಿಯ ಹತ್ಯೆ
ಮಾರಕ ಆಯುಧದಿಂದ ದಾಳಿ; ಆರೋಪಿಯ ಪತ್ತೆಗೆ ಪೊಲೀಸರ ಶೋಧ ಬಂಟ್ವಾಳ: ಬಂಟ್ವಾಳ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಯುವತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ನಡೆದಿದೆ. ಮೃತರನ್ನು ಕಕ್ಯಪದವು ನಿವಾಸಿ ಲಾವಣ್ಯ (ಹೆಸರು ತಿಳಿಸಿದಂತೆ) ಎಂದು ಗುರುತಿಸಲಾಗಿದೆ. ಲಾವಣ್ಯ ಅವರು ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಮ್ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಕಕ್ಯಪದವು ಕಡೆಗೆ ತೆರಳಲು ಅವರು ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ತಮ್ಮ ಸಂಬಂಧಿಕರೊಬ್ಬರಿಗೆ ಕರೆ ಮಾಡಿ, ತಮ್ಮ ಪಕ್ಕದಲ್ಲಿ
Jul 161 min read


ಕೊಡಿಯಾಲಬೈಲು ಜೈಲಿನಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆ
ಮಂಗಳೂರಿನ ಕೊಡಿಯಾಲಬೈಲು ಜಿಲ್ಲಾ ಕಾರಾಗೃಹದಲ್ಲಿ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಅಕ್ರಮವಾಗಿ ಮೊಬೈಲ್ ಫೋನ್ಗಳು ಪತ್ತೆಯಾಗಿದ್ದು, ಜೈಲಿನ ಭದ್ರತೆಯ ಬಗ್ಗೆ ತೀವ್ರ ಆತಂಕ ಮೂಡಿಸಿದೆ. ಜುಲೈ 7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ಸಿಬಂದಿಯೊಂದಿಗೆ ‘ಎ‘ ಬ್ಲಾಕ್ನಲ್ಲಿ ದಿಢೀರ್ ತಪಾಸಣೆ ನಡೆಸಿದಾಗ, ಕೈದಿಗಳಾದ ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಾಲ್ ಬಳಿ ಮೊಬೈಲ್ ಪತ್ತೆಯಾಗಿವೆ. ಜೈಲಿನ ನಿಯಮ ಉಲ್ಲಂಘಿಸಿ ಮೊಬೈಲ್ ಬಳಸುತ್ತಿದ್ದ ಈ ಇಬ್ಬರು ಆರೋಪಿಗಳ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಸದ್ಯ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
Jul 101 min read


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್: ಶಾಲೆಗಳಿಗೆ ರಜೆ, ಜನರಿಗೆ ಕಟ್ಟುನಿಟ್ಟಿನ ಸೂಚನೆ
ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲೂ ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಹಲವು ತುರ್ತು ಕ್ರಮಗಳನ್ನು ಕೈಗೊಂಡಿದೆ. ಅದರಂತೆ, ಜುಲೈ 2, 2026 ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಮತ್ತು ಪದವಿ
Jul 11 min read


ಸ್ನೇಹಿತರ ಬಳಗ (ರಿ.) ಕಲ್ಪಡ ವತಿಯಿಂದ ದಶಮ ಸಂಭ್ರಮ ಅಂಗವಾಗಿ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಮತ್ತು ಪುಸ್ತಕ ವಿತರಣೆ
ಕೊಡಿಯಾಲ, ಜೂನ್ 1: ಸ್ನೇಹಿತರ ಬಳಗ (ರಿ.) ಕಲ್ಪಡವು ತನ್ನ ದಶಮ ವಾರ್ಷಿಕೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಅದರ ಅಂಗವಾಗಿ ಸಮಾಜಮುಖಿ ಕಾರ್ಯಗಳನ್ನು ಕೈಗೊಂಡಿದೆ. ಈ ಪ್ರಯುಕ್ತ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಮೂವಪ್ಪೆ ಇಲ್ಲಿನ 2026-27ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್ಗಳು, ಪುಸ್ತಕಗಳು ಹಾಗೂ ಪೆನ್-ಪೆನ್ಸಿಲ್ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷರಾದ ಸುರೇಶ್ ಗುತ್ತು, ಗೌರವಾಧ್ಯಕ್ಷರಾದ ಶಿವರಾಮ ಉಪಾಧ್ಯಾಯ, ಗೌರವ ಸಲಹೆಗಾರರಾದ ಚಿದಾನಂದ ಉಪಾಧ್ಯಾಯ ಉಪಸ್ಥಿತರಿದ್ದರು. ಸಂಚಾಲಕರಾದ ಕೇಶವ ಕಲ್ಪಡ ತೋಟ, ಸಹ ಸಂಚಾಲಕರಾದ ಯ
Jun 11 min read


ಸುಬ್ರಹ್ಮಣ್ಯ-ಗುಂಡ್ಯ ಹೆದ್ದಾರಿಯಲ್ಲಿ ಅಪಘಾತ: ದೇವನಹಳ್ಳಿಯ ಮಹಿಳೆ ಸಾವು
ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಳ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಟೆಂಪೋ ಟ್ರಾವೆಲ್ಲರ್ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಮೇ 25ರಂದು ಸಂಜೆ ನಡೆದ ಈ ದುರ್ಘಟನೆಯಲ್ಲಿ ಚಿಕ್ಕಬಳ್ಳಾಪುರದ ಕೆರೆಸಂದ್ರಮನೆ ನಿವಾಸಿ ಆಂಜನಮ್ಮ (47) ಎಂಬುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಧರ್ಮಸ್ಥಳ, ಸುಬ್ರಹ್ಮಣ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ದರ್ಶನ ಮುಗಿಸಿ ಬೆಂಗಳೂರಿನತ್ತ ಮರಳುತ್ತಿದ್ದ ದೇವನಹಳ್ಳಿಯ 14 ಯಾತ್ರಾರ್ಥಿಗಳಿದ್ದ ಟೆಂಪೋಗೆ ಎದುರಿನಿಂದ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಟೆಂಪೋದಲ್ಲಿದ್ದ 5 ವರ್ಷದ ಬಾಲಕಿ ನಯಾನಿಕಾ ಸೇರಿ ಏಳು ಮಂದಿ
May 261 min read


ಬೆದ್ರುಪಣೆ: ಆನೆಗಳ ದಾಳಿಗೆ ಮರಿಯಾನೆ ಬಲಿ?
ಅರಂತೋಡು ಗ್ರಾಮದ ಬೆದ್ರುಪಣೆ ಎಂಬಲ್ಲಿ ಸುಮಾರು ಒಂದು ವರ್ಷದ ಮರಿಯಾನೆಯೊಂದು ನಿಗೂಢವಾಗಿ ಸಾವನ್ನಪ್ಪಿದೆ. ಸ್ಥಳೀಯ ನಿವಾಸಿ ಅಶೋಕ್ ಎಂಬುವವರ ಖಾಸಗಿ ತೋಟದಲ್ಲಿ ಸೋಮವಾರ ಮುಂಜಾನೆ ಈ ದುರ್ಘಟನೆ ಬೆಳಕಿಗೆ ಬಂದಿದೆ. ಗಂಡಾನೆಗಳ ನಡುವೆ ನಡೆದ ಭೀಕರ ದಾಳಿಯೇ ಈ ಮರಿಯಾನೆಯ ಸಾವಿಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ. ರಾತ್ರಿ ವೇಳೆ ತೋಟಕ್ಕೆ ಆನೆಗಳು ನುಗ್ಗಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದರು. ಆದರೆ, ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಆನೆಗಳ ಹಿಂಡಿನ ನಡುವೆ ಪರಸ್ಪರ ತೀವ್ರ ಕಿತ್ತಾಟ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಅರಣ್ಯಾ
May 251 min read


ಮಂಗಳೂರು ರೈಲ್ವೆ ವಲಯದಲ್ಲಿ ಬೃಹತ್ ಅಭಿವೃದ್ಧಿ: ಸಚಿವ ವಿ. ಸೋಮಣ್ಣ
ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ರೈಲು ನಿಲ್ದಾಣ ನಿರ್ಮಿಸಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಸಂಸದ ಬ್ರಿಜೇಶ್ ಚೌಟ ಅವರ ಪ್ರಸ್ತಾವನೆಯಂತೆ ಈ ಯೋಜನೆಯ ಅಧ್ಯಯನ ಆರಂಭವಾಗಿದೆ. ಇದೇ ವೇಳೆ ಕರಾವಳಿ ಜನರ ಬಹುದಿನಗಳ ಕನಸಾದ ಮಂಗಳೂರು–ಬೆಂಗಳೂರು 'ವಂದೇ ಭಾರತ್ ಎಕ್ಸ್ಪ್ರೆಸ್' ರೈಲು ಸಂಚಾರ ಇನ್ನು ಒಂದು ತಿಂಗಳೊಳಗೆ ಅಧಿಕೃತವಾಗಿ ಪ್ರಾರಂಭವಾಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. ಹಾಸನ-ಮಂಗಳೂರು ಘಾಟ್ ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಹೈಸ್ಪೀಡ್ ರೈಲಿಗೆ ಹಸಿರು
May 241 min read


ಮಂಗಳೂರು–ಸುಬ್ರಹ್ಮಣ್ಯ ಮಾರ್ಗಕ್ಕೆ MEMU ರೈಲು ಬೇಡಿಕೆ: ಸಚಿವ ಸೋಮಣ್ಣಗೆ ಮನವಿ, ಸಂಸದ ಬ್ರಿಜೇಶ್ ಚೌಟ ಬೆಂಬಲ
ಮಂಗಳೂರು, ಮೇ 23: ಮಂಗಳೂರು ಜಂಕ್ಷನ್ನಲ್ಲಿ ನಡೆದ ಅಮೃತ ಭಾರತ್ ಅಭಿವೃದ್ಧಿ ಪರಿಶೀಲನಾ ಸಭೆಯಲ್ಲಿ, ಮಂಗಳೂರು–ಸುಬ್ರಹ್ಮಣ್ಯ ರೋಡ್ ಪ್ಯಾಸೆಂಜರ್ ರೈಲನ್ನು MEMU (ಮೆಮು) ರೈಲಿಗೆ ಮೇಲ್ದರ್ಜೆಗೇರಿಸುವಂತೆ ಮಹತ್ವದ ಬೇಡಿಕೆ ಮುಂದಿರಿಸಲಾಯಿತು. ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಈ ಕುರಿತು ಮನವಿ ಸಲ್ಲಿಸಿದರು. ಈ ಬೇಡಿಕೆಗೆ ಸ್ಥಳೀಯ ಸಂಸದರು ಸಹ ಬೆಂಬಲ ಸೂಚಿಸಿದ್ದು, ಶೀಘ್ರದಲ್ಲೇ ಸಕಾರಾತ್ಮಕ ಸ್ಪಂದನೆ ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ವೇಗವಾದ ಹಾಗೂ ಹೆಚ್ಚು ಆವೃತ್ತಿಯ ರೈಲು ಸೇವೆ ಒದಗಿಸುವ ದೃಷ್ಟಿಯಿಂದ MEMU ರೈಲ
May 231 min read


ಬೆಳ್ತಂಗಡಿಯಲ್ಲಿ ಬೆಚ್ಚಿಬೀಳಿಸಿದ ಘಟನೆ: ದಿಡುಪೆ ಜಲಪಾತದಲ್ಲಿ ಯುವತಿಗೆ ಲೈಂಗಿಕ ಕಿರುಕುಳ – ಮೂವರು ಆರೋಪಿಗಳು ಬಂಧನ
ಬೆಳ್ತಂಗಡಿ, ದಕ್ಷಿಣ ಕನ್ನಡ: ಪ್ರಸಿದ್ಧ ಪ್ರವಾಸಿ ತಾಣವಾದ ದಿಡುಪೆ ಜಲಪಾತದಲ್ಲಿ ನಡೆದ ಆಘಾತಕಾರಿ ಘಟನೆಯೊಂದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜಲಪಾತದಲ್ಲಿ ನೀರಾಟ ಆಡುತ್ತಿದ್ದ ವೇಳೆ ಪ್ರವಾಸಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕೇರಳದ ಕಾಸರಗೋಡು ಮೂಲದ ಮೂವರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ಖಾದರ್ (36), ಫೈಜಲ್ ಆದಿಲ್ (27) ಮತ್ತು ಉಸ್ಮಾನ್ ಸಲೀಂ (18) ಎಂದು ಗುರುತಿಸಲಾಗಿದೆ. ಇವರು ಯುವತಿಯರನ್ನು ದಿಡುಪೆ ಜಲಪಾತಕ್ಕೆ ಕರೆದುಕೊಂಡು ಬಂದಿದ್ದರು ಎಂದು ತಿಳಿದುಬಂದಿದೆ. ಘಟನೆಯ ವಿವರಗಳ ಪ್ರಕಾರ, ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದ
May 211 min read


ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ | ಹಲವು ಜಿಲ್ಲೆಗಳಲ್ಲಿ ಯೆಲ್ಲೋ, ಆರೆಂಜ್ ಅಲರ್ಟ್
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ಮೂರುರಿಂದ ನಾಲ್ಕು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮಾಹಿತಿ ಪ್ರಕಾರ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಭಾಗಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಜನರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಿಕ್ಕಮಗಳೂರು, ಹಾ
May 161 min read


ಬೆಳ್ತಂಗಡಿ: ಅಕ್ರಮ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸ್ ದಾಳಿ – ಮೂವರ ಬಂಧನ, ಯುವತಿ ರಕ್ಷಣೆ
ಬೆಳ್ತಂಗಡಿ: ಅಕ್ರಮವಾಗಿ ನಿರ್ಮಾಣಗೊಂಡ ಕ್ಯಾಂಟಿನ್ ಒಳಗೆ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ, 29 ವರ್ಷದ ಯುವತಿಯನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಸುಂದರ್ ಶೆಟ್ಟಿ (55) ಅವರು ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ ಕಚೇರಿ ಪಕ್ಕದ ಸರ್ಕಾರಿ ಜಾಗದಲ್ಲಿ “ಪವನ್ ಕ್ಯಾಂಟಿನ್” ಎಂಬ ಹೆಸರಿನಲ್ಲಿ ಕಳೆದ 20 ವರ್ಷಗಳಿಂದ ಕ್ಯಾಂಟಿನ್ ನಡೆಸುತ್ತಿದ್ದರು ಎನ್ನಲಾಗಿದೆ. ಪ್ರತಿ ಭಾನುವಾರ ಕ್ಯಾಂಟಿನ್ಗೆ ರಜೆ ಇರುತ್ತಿದ್ದ ಸಮಯವನ್ನು ದುರುಪಯೋಗಪಡಿಸಿಕೊಂಡು, ಕ್ಯಾಂಟಿನ್ ಒಳಗೆ
May 111 min read


ಕುಟ್ರುಪ್ಪಾಡಿಯಲ್ಲಿ ದಾರುಣ ಘಟನೆ: ಡ್ಯಾಂನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿನಿಯರ ಸಾವು
ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರಿಯುವ ಗುಂಡ್ಯ ಹೊಳೆಯ ಕೊಲ್ಯದಕಟ್ಟ ಡ್ಯಾಂ ಬಳಿ ಶುಕ್ರವಾರ ಸಂಜೆ ಸಂಭವಿಸಿದ ದಾರುಣ ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ (21) ಹಾಗೂ ಸುನೀತಾ (15) ಎಂದು ಗುರುತಿಸಲಾಗಿದೆ. ರಜೆ ಹಿನ್ನೆಲೆಯಲ್ಲಿ ಐವರು ವಿದ್ಯಾರ್ಥಿನಿಯರು ಸ್ನೇಹಿತರೊಂದಿಗೆ ಡ್ಯಾಂ ಬಳಿ ತೆರಳಿ ನೀರಿನಲ್ಲಿ ಸ್ನಾನಕ್ಕೆ ಇಳಿದಿದ್ದರು. ಈ ವೇಳೆ ಅರ್ಪಿತಾ ಮತ್ತು ಸುನೀತಾ ಅವರು ನೀರಿನ ಆಳವನ್ನು ಅಂದಾಜಿಸದೆ ಮುಂದೆ ಸಾಗಿದ್ದು, ಏಕಾಏಕಿ ಮುಳುಗತೊಡಗಿದ್ದಾರೆ. ಜೊತೆ
May 81 min read


ಇಂದು ಕಾಣಿಯೂರಿನಲ್ಲಿ ನ್ಯಾಯವಾದಿ ನಿಶಾಂತ್ ಎ. ಅವರ ನೂತನ ವಕೀಲರ ಕಛೇರಿ ಉದ್ಘಾಟನೆ: ಗಣ್ಯರಿಂದ ಶುಭಹಾರೈಕೆ
ಕಾಣಿಯೂರಿನಲ್ಲಿ ನ್ಯಾಯವಾದಿ ನಿಶಾಂತ್ ಅವರ ಮುಂದಾಳತ್ವದಲ್ಲಿ ಆರಂಭಗೊಂಡ ನೂತನ ಸಂಸ್ಥೆಯ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ನಿಶಾಂತ್ ಅವರ ತಂದೆ ಭಾಸ್ಕರ ಪೂಜಾರಿ ಹಾಗೂ ತಾಯಿ ವನಿತಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಹಿರಿಯ ನ್ಯಾಯವಾದಿ ಹಾಗೂ ಪುತ್ತೂರು ಯೋಗ ಕೇಂದ್ರದ ಅಧ್ಯಕ್ಷ ಗಿರೀಶ ಮಳಿ, ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿಜಯಕುಮಾರ್ ಸೊರಕೆ, ಪುತ್ತೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಶೀನಪ್ಪ ಗೌಡ ಬೈತಡ್ಕ, ಕಾಣಿಯೂರು ಪ್ರಗತಿ ವಿದ್ಯಾಸಂಸ
Apr 301 min read


ದಶಮ ವಾರ್ಷಿಕೋತ್ಸವದ ಅಂಗವಾಗಿ ಮೇ 10ರಂದು ಸ್ನೇಹಿತರ ಬಳಗ (ರಿ.) ಕಲ್ಪಡ, ಕೊಡಿಯಾಲ ಬೃಹತ್ ಆಧಾರ್ ಹಾಗೂ ವಿಮಾ ಶಿಬಿರ
ಕಲ್ಪಡ–ಕೊಡಿಯಾಲ ಭಾಗದ ಜನತೆಗೆ ಆಧಾರ್ ಸಂಬಂಧಿತ ಸೇವೆಗಳು ಹಾಗೂ ವಿಮಾ ಸೌಲಭ್ಯಗಳನ್ನು ತಲುಪಿಸುವ ಉದ್ದೇಶದಿಂದ ಸ್ನೇಹಿತರ ಬಳಗ (ರಿ.) ಕಲ್ಪಡ, ಕೊಡಿಯಾಲ ತನ್ನ ದಶಮ ವಾರ್ಷಿಕೋತ್ಸವದ ಅಂಗವಾಗಿ ಬೃಹತ್ ಶಿಬಿರವನ್ನು ಆಯೋಜಿಸಿದೆ. ಈ ಶಿಬಿರಕ್ಕೆ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ಸಹಯೋಗದೊಂದಿಗೆ . ಮೇ 10, 2026 ರಂದು ಕೊಡಿಯಾಲದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಮೂವಪ್ಪೆ ನಡೆಯಲಿರುವ ಈ ಶಿಬಿರದಲ್ಲಿ ಬೆಳಿಗ್ಗೆ 9:00ರಿಂದ ಸಂಜೆ 4:30ರವರೆಗೆ ವಿವಿಧ ಸೇವೆಗಳು ಲಭ್ಯವಿರಲಿವೆ ಶಿಬಿರದಲ್ಲಿ ಹೊಸ ಆಧಾರ್ ನೋಂದಣಿ, ಹೆಸರು, ವಿಳಾಸ ಹಾಗೂ ಜನ್ಮ ದಿನಾಂಕ ತಿದ್ದುಪಡಿ ಸೇರಿದಂತೆ ವಿವಿಧ ಆಧಾರ್ ಸ
Apr 291 min read


ಏಳು ವರ್ಷಗಳ ಬಳಿಕ ಸಿಕ್ಕ ದರೋಡೆ ಪ್ರಕರಣದ ಆರೋಪಿ – ಧರ್ಮಸ್ಥಳ ಪೊಲೀಸರ ಚಾಣಾಕ್ಷ ಕಾರ್ಯಾಚರಣೆ
ಧರ್ಮಸ್ಥಳ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ರೆಖ್ಯಾ ಗ್ರಾಮದ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವು ವರ್ಷಗಳಿಂದ ಪೊಲೀಸರ ಕಣ್ಣಿಗೆ ಮಣ್ಣೆರೆದು ಓಡಾಡುತ್ತಿದ್ದ ಪ್ರಮುಖ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 2017ರಲ್ಲಿ ನಡೆದ ಈ ಪ್ರಕರಣದಲ್ಲಿ ದುಷ್ಕರ್ಮಿಗಳ ತಂಡ ಲಾರಿಯನ್ನು ಅಡ್ಡಗಟ್ಟಿ ದರೋಡೆ ನಡೆಸಿ ಪರಾರಿಯಾಗಿತ್ತು. ಈ ಪ್ರಕರಣದಲ್ಲಿ ಬೆಂಗಳೂರಿನ ಬನಶಂಕರಿ ನಿವಾಸಿ ಮಣಿ ಅಲಿಯಾಸ್ ಮಣಿಕಂಠ (32) ಎರಡನೇ ಆರೋಪಿಯಾಗಿದ್ದ. ಕೃತ್ಯದ ನಂತರ ಜಾಮೀನು ಪಡೆದು ಹೊರಬಂದ ಆತ, ನ್ಯಾಯಾಲಯದ ವಿಚಾರಣೆಗೆ ಹಾಜ
Apr 281 min read


ಕಡಬ: ಸ್ನಾನಕ್ಕೆಂದು ನದಿಗಿಳಿದ ಯುವಕ ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆ
ಕಡಬದ ಐತ್ತೂರು ಗ್ರಾಮದ ಅರಬ್ಬಿ ತೋಡಿನಲ್ಲಿ ಸ್ನಾನಕ್ಕೆಂದು ಇಳಿದಿದ್ದ ಯುವಕ ರಕ್ಷಿತ್ (26) ನೀರಿನ ಸೆಳೆತಕ್ಕೆ ಸಿಲುಕಿ ನಾಪತ್ತೆಯಾಗಿದ್ದಾರೆ. ಮೂಲತಃ ಮರ್ದಾಳದ ನಿವಾಸಿಯಾಗಿರುವ ಇವರು ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು. ಸೋಮವಾರ ಸಂಜೆ ಸ್ನೇಹಿತರೊಂದಿಗೆ ನದಿಗೆ ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಯುವಕ ನಾಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಕಡಬ ಪೊಲೀಸರು ಮತ್ತು ಸ್ಥಳೀಯರು ಸ್ಥಳಕ್ಕೆ ಧಾವಿಸಿ ತೀವ್ರ ಹುಡುಕಾಟ ನಡೆಸಿದ್ದಾರೆ. ಆದರೆ, ಕತ್ತಲಾದ ಕಾರಣ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ಸದ್ಯ ನಾಪತ್ತೆಯಾದ ರಕ್ಷಿತ್ ಅವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಹೆಚ್ಚಿನ ಮಾ
Apr 271 min read


ಪಜೀರು: ಜಾತ್ರೆಗೆ ಹೋದ ಹತ್ತನೇ ತರಗತಿ ವಿದ್ಯಾರ್ಥಿನಿ ನಾಪತ್ತೆ ಪೊಲೀಸರಿಂದ ಲುಕ್ ಔಟ್ ನೋಟಿಸ್ ಜಾರಿ
ಪಜೀರು ಗ್ರಾಮದ ಅಡ್ಕ ನಿವಾಸಿಯಾದ ಹದಿನಾರು ವರ್ಷದ ಚೈತನ್ಯ ಎಂಬ ಬಾಲಕಿ ಪೊಳಲಿ ಜಾತ್ರೆಗೆಂದು ತೆರಳಿ ನಿಗೂಢವಾಗಿ ನಾಪತ್ತೆಯಾಗಿರುವುದು ಇಡೀ ಗ್ರಾಮದಲ್ಲಿ ಆತಂಕ ಮೂಡಿಸಿದೆ. ಹರೇಕಳದ ಶಾಲೆಯಲ್ಲಿ ಹತ್ತನೇ ತರಗತಿ ಪೂರೈಸಿ ರಜೆಯಲ್ಲಿದ್ದ ಈಕೆ, ಗೆಳೆಯರೊಂದಿಗೆ ಸಂಭ್ರಮದಿಂದ ಹೊರಟವಳು ಮರಳಿ ಬಾರದಿರುವುದು ಹೆತ್ತವರ ನೆಮ್ಮದಿ ಕೆಡಿಸಿದೆ. ಸಂಬಂಧಿಕರ ಮನೆಗಳಲ್ಲಿ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಈಗ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಬಾಲಕಿಯ ಪತ್ತೆಗಾಗಿ ಪೊಲೀಸರು ಈಗಾಗಲೇ ಲುಕ್ ಔಟ್ ನೋಟಿಸ್ ಜಾರಿಗೊಳಿಸ
Apr 191 min read


ಖಿನ್ನತೆಗೆ ಬಲಿಯಾಯಿತೇ ಮತ್ತೊಂದು ಜೀವ? ಕಡಬದ ಯುವಕನ ದುರಂತ ಅಂತ್ಯ
ಕಡಬದ ಪುಳಿಕುಕ್ಕು ಸಮೀಪ ಮಡಪ್ಪಾಡಿ ಗ್ರಾಮದ ಕಿಶನ್ ಎ ಹೆಚ್ (32) ಎಂಬ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗಾರಿನ ಬ್ಯಾಂಕೊಂದರಲ್ಲಿ ಲೋನ್ ಆಫೀಸರ್ ಆಗಿದ್ದ ಇವರು, ಕಳೆದ ಕೆಲವು ಸಮಯದಿಂದ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಾರ್ಚ್ 21ರಂದು ವಿಷ ಸೇವಿಸಿದ್ದ ಇವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸುಮಾರು 20 ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿದ ಕಿಶನ್, ಏಪ್ರಿಲ್ 14ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರ ಸಹೋದರ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊ
Apr 161 min read
Archive
bottom of page



