;
top of page

ಕರ್ತವ್ಯದ ವೇಳೆ ಮದ್ಯಪಾರ್ಟಿ: 6 ಪಿಡಿಒ ಸೇರಿ ಸಿಬ್ಬಂದಿ ಅಮಾನತು

Jul 29
1 min read

ಕರ್ತವ್ಯದ ಸಮಯದಲ್ಲಿ ಸಿದ್ದರಬೆಟ್ಟದ ತಪ್ಪಲಿನಲ್ಲಿ ಮದ್ಯ ಹಾಗೂ ಮಾಂಸ ಸೇವಿಸಿ ಮೋಜು-ಮಸ್ತಿ ಮಾಡಿದ್ದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 6 ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಸೇರಿದಂತೆ ಒಟ್ಟು 9 ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಮಾಧ್ಯಮಗಳಲ್ಲಿ ಈ ವರದಿ ಪ್ರಸಾರವಾದ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರ ಖಂಡ್ರೆ ಅವರ ಸೂಚನೆಯಂತೆ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ವಾಸಂತಿ ಅಮರ್ ಅವರು ಕಾರಣ ಕೇಳಿ ನೋಟಿಸ್ ನೀಡಿದ ನಂತರ ಈ ಅಮಾನತು ಆದೇಶ ಹೊರಡಿಸಿದ್ದಾರೆ. ಅಮಾನತುಗೊಂಡವರಲ್ಲಿ ಶಿವಗಂಗೆ, ಅಗಳಕುಪ್ಪೆ, ಗೊಲ್ಲಹಳ್ಳಿ, ಮಣ್ಣೆ, ಸೋಂಪುರ ಮತ್ತು ಬೆಟ್ಟಕೋಟೆ ಗ್ರಾ.ಪಂ.ಗಳ ಪಿಡಿಒಗಳು, ಇಬ್ಬರು ಕಾರ್ಯದರ್ಶಿಗಳು ಹಾಗೂ ಒಬ್ಬ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿದ್ದಾರೆ.

ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು 2021 ಅನ್ನು ಉಲ್ಲಂಘಿಸಿ, ಕಚೇರಿ ವೇಳೆಯಲ್ಲಿ ಸಾರ್ವಜನಿಕರಿಗೆ ಲಭ್ಯವಿಲ್ಲದೆ ಬೇಜವಾಬ್ದಾರಿತನ ತೋರಿದ್ದಕ್ಕಾಗಿ ಇಲಾಖಾ ವಿಚಾರಣೆ ಕಾಯ್ದಿರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಈ ಕ್ರಮ ಜರುಗಿಸಲಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page