ಕುಕ್ಕೆ ಸುಬ್ರಹ್ಮಣ್ಯ: ಚಂಪಾಷಷ್ಟಿ ಮಹೋತ್ಸವ ಹಿನ್ನಲೆ ಮದ್ಯದಂಗಡಿ ಮುಚ್ಚಲು ಡಿಸಿ ಆದೇಶ
- sathyapathanewsplu
- Nov 25
- 1 min read

ಸುಬ್ರಹ್ಮಣ್ಯ:
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯುವ ಪ್ರಸಿದ್ಧ ಚಂಪಾಷಷ್ಠಿ ಜಾತ್ರಾ ಮಹೋತ್ಸವ ಡಿಸೆಂಬರ್ 2 ರವರೆಗೆ ನಡೆಯಲಿದ್ದು, ಜಾತ್ರೆಯ ಮುಖ್ಯ ಕಾರ್ಯಕ್ರಮಗಳ ಅಂಗವಾಗಿ ನವೆಂಬರ್ 25 ರಂದು ಪಂಚಮಿ ರಥೋತ್ಸವ ಹಾಗೂ ತೈಲಾಭ್ಯಂಜನ, 26 ರಂದು ಚಂಪಾಷಷ್ಠಿ ಮಹಾರಥೋತ್ಸವ ಆಯೋಜಿಸಲಾಗಿದೆ.
ಈ ಎರಡು ದಿನಗಳಲ್ಲಿ ಸುಮಾರು 50 ರಿಂದ 60 ಸಾವಿರ ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದೆ. ಭಕ್ತರ ಭದ್ರತೆ, ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನವೆಂಬರ್ 25 ಬೆಳಿಗ್ಗೆ 6 ಗಂಟೆಯಿಂದ 26ರ ರಾತ್ರಿ 12 ಗಂಟೆಯವರೆಗೆ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ವ್ಯಾಪ್ತಿಯಲ್ಲಿರುವ ಎಲ್ಲಾ ಮದ್ಯದಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶಿಸಿದ್ದಾರೆ.
ಜಾತ್ರೆಯ ಸಂದರ್ಭದಲ್ಲಿ ಸಮಾಜ ವಿರೋಧಿ ಅಂಶಗಳು ಹಾಗೂ ಮದ್ಯಪಾನದಿಂದ ಉಂಟಾಗುವ ಅಶಾಂತಿಯನ್ನು ತಡೆಯುವುದು ಈ ಆದೇಶದ ಮುಖ್ಯ ಉದ್ದೇಶವಾಗಿದ್ದು, ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಭದ್ರತೆಯೊಂದಿಗೆ ಕರ್ತವ್ಯ ನಿರ್ವಹಿಸಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.






Comments