;
top of page

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ – ಜೈಲಿನಲ್ಲಿ ದರ್ಶನ್ ಗಲಾಟೆ ವದಂತಿ, ಅಧಿಕಾರಿಗಳ ಖಂಡನೆ

  • Writer: sathyapathanewsplu
    sathyapathanewsplu
  • Dec 9
  • 1 min read
ree

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಇತರೆ ಆರೋಪಿಗಳ ಜೊತೆ ರಂಪಾಟ ನಡೆಸಿದ್ದಾರೆ ಎನ್ನುವ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ದರ್ಶನ್, ಆರ್. ನಾಗರಾಜ್, ಚಾಲಕ ಲಕ್ಷ್ಮಣ್, ಉದ್ಯಮಿ ಪ್ರದೂಷ್ ರಾವ್ ಹಾಗೂ ಆಟೋ ಚಾಲಕರು ಅನುಕುಮಾರ್ (ಅನು), ಜಗದೀಶ್ (ಜಗ್ಗ) – ಎಲ್ಲರೂ ಒಂದೇ ಬ್ಯಾರಕ್‌ನಲ್ಲಿ ಇರಿಸಿರುವುದು ತಿಳಿದುಬಂದಿದೆ.


ದರ್ಶನ್ ಅವರು ಆರ್. ನಾಗರಾಜ್ ಹೊರತುಪಡಿಸಿ ಉಳಿದವರ ಜೊತೆ ಗಲಾಟೆ, ಅವಾಚ್ಯ ಶಬ್ದ ಬಳಕೆ ಹಾಗೂ ಕಾಲಿನಿಂದ ಒದ್ದಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದರೂ, ಕಾರಾಗೃಹದ ಎಸ್‌ಪಿ ಅಂಶುಕುಮಾರ್ ಅವರು ಈ ಆರೋಪಗಳನ್ನು ತಳ್ಳಿಹಾಕಿದ್ದಾರೆ.

“ದರ್ಶನ್ ಇರುವ ಬ್ಯಾರಕ್‌ನಲ್ಲಿ ಯಾವುದೇ ಗಲಾಟೆ ನಡೆದಿಲ್ಲ ಎಂಬ ಮಾಹಿತಿ ನಮಗೆ ಇದೆ. ಹರಿದಾಡುತ್ತಿರುವ ವದಂತಿಯನ್ನು ಪರಿಶೀಲಿಸುತ್ತಿದ್ದೇವೆ. ಜೈಲು ಸಿಬ್ಬಂದಿಗೆ ಅಗತ್ಯ ಸೂಚನೆ ನೀಡಲಾಗಿದೆ” ಎಂದು ಅವರು ತಿಳಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page