;
top of page

ಮುಂಡಗೋಡು: ಪೊಲೀಸರ ಭರ್ಜರಿ ಕಾರ್ಯಾಚರಣೆ; 8 ಲಕ್ಷ ಮೌಲ್ಯದ ಚರಸ್ ಸಹಿತ ಇಂಜಿನಿಯರ್ ಬಂಧನ

  • Writer: sathyapathanewsplu
    sathyapathanewsplu
  • Nov 23
  • 1 min read
ree

ಮುಂಡಗೋಡು: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ಪೊಲೀಸರು ಮಾದಕ ದ್ರವ್ಯ ಮಾರಾಟ ಜಾಲದ ಮೇಲೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಸುಮಾರು 8 ಲಕ್ಷ ರೂಪಾಯಿ ಮೌಲ್ಯದ 781 ಗ್ರಾಂ ನಿಷೇಧಿತ ಮಾದಕ ವಸ್ತು 'ಚರಸ್' ಅನ್ನು ವಶಪಡಿಸಿಕೊಂಡು, ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಮುಂಡಗೋಡಿನ ಸುಭಾಷ್ ನಗರದ ನಿವಾಸಿ, ವೃತ್ತಿಯಲ್ಲಿ ಇಂಜಿನಿಯರ್ ಆಗಿರುವ ಸಚಿನ್ ಟೇಕಬಹುದ್ದೂರ್ ಗೋರ್ಖಾ (26) ಎಂದು ಗುರುತಿಸಲಾಗಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆಗಿಳಿದ ಮುಂಡಗೋಡು ಠಾಣೆಯ ಸಿ.ಪಿ.ಐ ರಂಗನಾಥ್ ನೀಲಮ್ಮನವರ್ ಹಾಗೂ ಪಿ.ಎಸ್.ಐ ಯಲ್ಲಾಲಿಂಗ ಕುನ್ನೂರು ನೇತೃತ್ವದ ಪೊಲೀಸ್ ತಂಡ, ನಗರದ ಬಸ್ ಡಿಪೋ ಬಳಿ ಬೈಕ್‌ನಲ್ಲಿ ಚರಸ್ ಸಾಗಾಟ/ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ದಾಳಿ ನಡೆಸಿ ಆರೋಪಿಯನ್ನು ಸೆರೆಹಿಡಿದಿದೆ.

ಆರೋಪಿಯು ಈ ಮಾದಕ ವಸ್ತುವನ್ನು ಮುಂಡಗೋಡು ಟಿಬೇಟಿಯನ್ ಕ್ಯಾಂಪ್‌ನಲ್ಲಿ ಮಾರಾಟ ಮಾಡುವ ಉದ್ದೇಶದಿಂದ ತಂದಿದ್ದನು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಸುಶಿಕ್ಷಿತ ಇಂಜಿನಿಯರ್ ಒಬ್ಬರು ಇಂತಹ ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page