;
top of page

ಅಕ್ರಮ ಗೋ ಸಾಗಾಟ: ನರಿಮೊಗರು ಬಳಿ ವಾಹನ ಕೆಟ್ಟು ನಿಂತು ಗೋವುಗಳನ್ನು ಬಿಟ್ಟು ಪರಾರಿ

  • Writer: sathyapathanewsplu
    sathyapathanewsplu
  • Nov 29
  • 1 min read
ree

ಪುತ್ತೂರು: ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ಗಡಿಪಿಲ ಎಂಬಲ್ಲಿ ಇಂದು ಶನಿವಾರ ಮುಂಜಾನೆ ಅಕ್ರಮ ಗೋ ಸಾಗಾಟಕ್ಕೆ ಯತ್ನಿಸಿದ ಘಟನೆಯೊಂದು ನಡೆದಿದೆ. ಮುಂಜಾನೆ ಸುಮಾರು 5 ಗಂಟೆಯ ಸುಮಾರಿಗೆ ಗೋವುಗಳನ್ನು ತುಂಬಿಕೊಂಡು ಬರುತ್ತಿದ್ದ ವಾಹನವು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದೆ ಎಂದು ತಿಳಿದುಬಂದಿದೆ. ವಾಹನ ಕೆಟ್ಟು ನಿಂತದ್ದನ್ನು ಅರಿತ ಗೋ ಸಾಗಾಟ ಮಾಡುತ್ತಿದ್ದ ವ್ಯಕ್ತಿಗಳು ವಾಹನದಲ್ಲಿದ್ದ ಗೋವುಗಳನ್ನು ನಡುರಸ್ತೆಯಲ್ಲೇ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾರೆ.

ಈ ಘಟನೆಯ ಕುರಿತು ಮಾಹಿತಿ ಪಡೆದ ತಕ್ಷಣ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಕಾರ್ಯಕರ್ತರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆಯ ವೇಳೆ ಯಾವುದೇ ವಾರೀಸುದಾರರಿಲ್ಲದ ಸ್ಥಿತಿಯಲ್ಲಿ ಗೋವುಗಳು ರಸ್ತೆಯ ಮೇಲೆ ಪತ್ತೆಯಾಗಿವೆ. ಬಳಿಕ ಕಾರ್ಯಕರ್ತರು ಈ ಘಟನೆಯ ಬಗ್ಗೆ ಸಮಗ್ರ ಮಾಹಿತಿ ಹಾಗೂ ದೂರು ದಾಖಲಿಸಲು ಪುತ್ತೂರು ನಗರ ಪೊಲೀಸ್‌ ಠಾಣೆಗೆ ತೆರಳಿದ್ದಾರೆ.

ನಡುರಸ್ತೆಯಲ್ಲಿ ಪತ್ತೆಯಾದ ಈ ಗೋವುಗಳನ್ನು ಕಳವು ಮಾಡಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂಬ ಸಂಶಯವನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ವಾಹನ ಹಾಗೂ ಗೋ ಸಾಗಾಟದ ಹಿಂದಿರುವ ವ್ಯಕ್ತಿಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿ, ಕಳ್ಳತನ ಮತ್ತು ಅಕ್ರಮ ಸಾಗಾಟದ ಕುರಿತು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಟ್ರಸ್ಟ್‌ ಆಗ್ರಹಿಸಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page