;
top of page

ನಟನೆಗೆ ದಳಪತಿ ವಿಜಯ್ ಗುಡ್‌ಬೈ: ಸಿನಿಪಯಣ ಮುಗಿಸಿ ರಾಜಕೀಯದತ್ತ ಸಂಪೂರ್ಣ ಚಿತ್ತ

  • Writer: sathyapathanewsplu
    sathyapathanewsplu
  • Dec 28, 2025
  • 1 min read

ಚೆನ್ನೈ: ತಮಿಳು ಚಿತ್ರರಂಗದ ಅಪ್ರತಿಮ ನಟ, ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರು ತಮ್ಮ 33 ವರ್ಷಗಳ ಸುದೀರ್ಘ ನಟನಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ್ದಾರೆ. ಮಲೇಷ್ಯಾದಲ್ಲಿ ನಡೆದ ತಮ್ಮ ಕೊನೆಯ ಚಿತ್ರ ‘ಜನ ನಾಯಗನ್’ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇನ್ನು ಮುಂದೆ ತಾವು ಬಣ್ಣದ ಲೋಕದಿಂದ ದೂರ ಸರಿದು ಸಂಪೂರ್ಣವಾಗಿ ರಾಜಕೀಯ ಜೀವನದಲ್ಲಿ ತೊಡಗಿಸಿಕೊಳ್ಳುವುದಾಗಿ ಭಾವುಕರಾಗಿ ತಿಳಿಸಿದರು. "ನಾನು ಮರಳಿನಲ್ಲಿ ಸಣ್ಣ ಮನೆ ಕಟ್ಟಲು ಬಂದವನು, ಆದರೆ ನೀವು ನನಗೆ ಅರಮನೆ ಕಟ್ಟಿಕೊಟ್ಟಿದ್ದೀರಿ" ಎಂದು ಅಭಿಮಾನಿಗಳ ಪ್ರೀತಿಗೆ ವಿಜಯ್ ಕೃತಜ್ಞತೆ ಸಲ್ಲಿಸಿದರು.

1992ರಲ್ಲಿ ನಾಯಕನಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ವಿಜಯ್, ಇದುವರೆಗೆ 80ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. 2024ರಲ್ಲಿ ‘ತಮಿಳಗ ವೆಟ್ರಿ ಕಳಗಂ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿರುವ ಅವರು, 51ನೇ ವಯಸ್ಸಿನಲ್ಲಿ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ‘ಕಚೇರಿ’ ಹಾಡಿಗೆ ಹೆಜ್ಜೆ ಹಾಕುವ ಮೂಲಕ ಅಭಿಮಾನಿಗಳನ್ನು ರಂಜಿಸಿದ ಅವರು, "ಜನರು ನನಗಾಗಿ ನಿಂತಿದ್ದಾರೆ, ಅವರಿಗಾಗಿ ಮುಂದಿನ 30 ವರ್ಷ ಸೇವೆ ಸಲ್ಲಿಸಲು ನಾನು ಸಿದ್ಧ" ಎಂದು ಹೇಳುವ ಮೂಲಕ ತಮ್ಮ ರಾಜಕೀಯ ಬದ್ಧತೆಯನ್ನು ಪ್ರಕಟಿಸಿದರು.

ಎಚ್. ವಿನೋದ್ ನಿರ್ದೇಶನದ ‘ಜನ ನಾಯಗನ್’ ವಿಜಯ್ ಅಭಿನಯದ ಕೊನೆಯ ಚಿತ್ರವಾಗಿದ್ದು, ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾ ಎನ್ನಲಾಗಿದೆ. ಈ ಚಿತ್ರದಲ್ಲಿ ಪೂಜಾ ಹೆಗ್ಡೆ, ಪ್ರಿಯಾಮಣಿ, ಬಾಬಿ ಡಿಯೋಲ್ ಹಾಗೂ ಪ್ರಕಾಶ್ ರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು, ಅನಿರುದ್ಧ್ ರವಿಚಂದರ್ ಸಂಗೀತ ನೀಡಿದ್ದಾರೆ. ಅಪಾರ ನಿರೀಕ್ಷೆ ಮೂಡಿಸಿರುವ ಈ ಚಿತ್ರವು ಜನವರಿ 9, 2026ರಂದು ವಿಶ್ವಾದ್ಯಂತ ತೆರೆಕಾಣಲಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಕೊನೆಯ ಬಾರಿ ತೆರೆಯ ಮೇಲೆ ನೋಡಲು ಕಾತರದಿಂದ ಕಾಯುತ್ತಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page