ಪ್ರಾಣಿಗಳಿಗೂ ಬದುಕುವ ಹಕ್ಕಿದೆ: ಹೈಕೋರ್ಟ್ ಮಹತ್ವದ ತೀರ್ಪು
- Jun 25
- 1 min read

ಪ್ರಾಣಿಗಳಿಗೂ ಹಿಂಸೆಯಿಲ್ಲದೆ ಬದುಕುವ ಹಕ್ಕಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ. ನಾಯಿಗಳ ಮೇಲಿನ ಕ್ರೌರ್ಯ ಮತ್ತು ಲೈಂಗಿಕ ದುರ್ಬಳಕೆಯ ಆರೋಪ ಎದುರಿಸುತ್ತಿರುವ ಬೆಂಗಳೂರಿನ ಕೆ.ಇ. ರಮೇಶ್ ಎಂಬಾತನಿಗೆ 9 ನಾಯಿಗಳ ಕಸ್ಟಡಿಯನ್ನು ಮರಳಿ ನೀಡಬಾರದು ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಆದೇಶಿಸಿದೆ.
ನಾಗಸಂದ್ರದ ನಿವಾಸಿಯಾದ ರಮೇಶ್ ವಿರುದ್ಧ ಬಿಎನ್ಎಸ್ ಹಾಗೂ ಪ್ರಾಣಿ ಕ್ರೌರ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಹಿಂದೆ ನಾಯಿಗಳನ್ನು ಮಾಲೀಕನಿಗೆ ಹಿಂತಿರುಗಿಸಲು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಕಟುವಾಗಿ ಟೀಕಿಸಿದ್ದು, ಅದನ್ನು “ಆಘಾತಕಾರಿ” ಎಂದು ಕರೆದಿದೆ.
ಮೂಕ ಜೀವಿಗಳಿಗೂ ನೋವಾಗುತ್ತದೆ ಮತ್ತು ನ್ಯಾಯ ದೊರಕಬೇಕು ಎಂದು ಹೇಳಿರುವ ಕೋರ್ಟ್, ರಕ್ಷಿಸಲ್ಪಟ್ಟ ಎಲ್ಲಾ ನಾಯಿಗಳನ್ನು ಪೆಟಾ (PETA) ಸಂಸ್ಥೆಯ ವಶದಲ್ಲಿಯೇ ಮುಂದುವರಿಸಲು ಸೂಚಿಸಿದೆ. ಪ್ರಾಣಿ ಕಲ್ಯಾಣ ಮತ್ತು ಸುರಕ್ಷತೆಯನ್ನು ಎತ್ತಿಹಿಡಿಯುವಲ್ಲಿ ಈ ತೀರ್ಪು ಮಹತ್ವದ ಮೈಲಿಗಲ್ಲಾಗಿದೆ.







Comments