;
top of page

ಅಣ್ಣಾಮಲೈ ಮನವೊಲಿಸಿದ ಅಮಿತ್ ಶಾ: ತಮಿಳುನಾಡು ಬಿಜೆಪಿಯಲ್ಲಿ ಬದಲಾವಣೆಯ ಗಾಳಿ!

  • Jun 3
  • 1 min read

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಘಟನೆ ತೀವ್ರ ಸಂಚಲನ ಮೂಡಿಸಿದೆ. ಅವರು ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದರು. ಅಲ್ಲದೆ, ಬಿಜೆಪಿಯಿಂದ ಹೊರಬಂದು 'ಮಕ್ಕಳ್ ಶಕ್ತಿ ಇಯಕ್ಕಂ' ಹೆಸರಿನ ಸ್ವತಂತ್ರ ಸಂಘಟನೆ ಆರಂಭಿಸಲು ನಿರ್ಧರಿಸಿದ್ದರು ಎಂದು ವರದಿಯಾಗಿತ್ತು.

ಆದರೆ, ಈ ರಾಜಕೀಯ ಹೈಡ್ರಾಮಾಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಎಂಟ್ರಿ ಕೊಟ್ಟ ಬೆನ್ನಲ್ಲೇ ಕಥೆ ಸಂಪೂರ್ಣ ಉಲ್ಟಾ ಆಗಿದೆ. ಅಣ್ಣಾಮಲೈ ಅವರೊಂದಿಗೆ ಗಹನವಾದ ಚರ್ಚೆ ನಡೆಸಿದ ಅಮಿತ್ ಶಾ, ಅವರ ಅಸಮಾಧಾನವನ್ನು ಶಮನಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ವರಿಷ್ಠರ ಮನವೊಲಿಕೆಗೆ ಮಣಿದಿರುವ ಅಣ್ಣಾಮಲೈ ತಮ್ಮ ರಾಜೀನಾಮೆ ನಿರ್ಧಾರವನ್ನು ಸದ್ಯಕ್ಕೆ ವಾಪಸ್ ಪಡೆದಿದ್ದಾರೆ ಎನ್ನಲಾಗಿದೆ.

ಈ ಮಹತ್ವದ ಬೆಳವಣಿಗೆಯ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ತಮಿಳುನಾಡಿನ ಪ್ರಸ್ತುತ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್‌ಗೆ ತುರ್ತು ಸಮನ್ಸ್ ಜಾರಿಗೊಳಿಸಿ ದೆಹಲಿಗೆ ಕರೆಸಿಕೊಂಡಿದೆ. ಈ ಹಠಾತ್ ಸಭೆಗಳು ದ್ರಾವಿಡ ನಾಡಿನಲ್ಲಿ ಬಿಜೆಪಿಯ ಆಂತರಿಕ ಬಣ ರಾಜಕೀಯ ಮತ್ತು ಮುಂಬರುವ ರಣತಂತ್ರದಲ್ಲಿ ಭಾರಿ ಬದಲಾವಣೆಯ ಮುನ್ಸೂಚನೆ ನೀಡಿವೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page