ಬೇಕರಿ ಉದ್ಯಮಿ ಮೋಹನ್ ನಾಯ್ಕ ದಡ್ಡು ಮೆದುಳಿನ ರಕ್ತಸ್ರಾವದಿಂದ ನಿಧನ

ಕಡಬ: ಎಡಮಂಗಲದ ಯುವ ಬೇಕರಿ ಉದ್ಯಮಿ, ದಡ್ಡು ನಿವಾಸಿ ಮೋಹನ್ ನಾಯ್ಕ (35) ಮೆದುಳಿನ ರಕ್ತಸ್ರಾವದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಸೆ.6 ರಂದು ಬೇಕರಿ ಉತ್ಪನ್ನ ಸರಬರಾಜು ಮಾಡಲು ಕಾರಿನಲ್ಲಿ ತೆರಳುತ್ತಿದ್ದಾಗ ರಕ್ತದೊತ್ತಡ ಹೆಚ್ಚಾಗಿ ಅವರಿಗೆ ಬ್ರೈನ್ ಹ್ಯಾಮರೇಜ್ ಸಂಭವಿಸಿತ್ತು. ತಕ್ಷಣ ಅವರನ್ನು ಕಡಬ ಆಸ್ಪತ್ರೆಗೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.

ಮೃತರು ಪತ್ನಿ, ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಯುವ ಉದ್ಯಮಿಯ ಅಕಾಲಿಕ ಮರಣಕ್ಕೆ ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.







Comments