ಇವಿಎಂ ಬದಲು ಇನ್ಮುಂದೆ ಮತಪತ್ರ ಬಳಕೆ; ರಾಜ್ಯಪಾಲರ ಅಂಕಿತ

ಇನ್ಮುಂದೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಮತಪತ್ರಗಳ ಯುಗ ಮರಳಲಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ-2026ಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದು, ಸರ್ಕಾರವು ಅಧಿಕೃತವಾಗಿ ಗೆಜೆಟ್ ಪ್ರಕಟಣೆ ಹೊರಡಿಸಿದೆ.

ಈ ಮಹತ್ವದ ಬದಲಾವಣೆಯು ಗ್ರಾಮ, ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳಿಗೆ ಅನ್ವಯವಾಗಲಿದೆ. ಚುನಾವಣಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಹೆಚ್ಚಿಸಲು ಹಾಗೂ ಮತದಾನದ ಗೌಪ್ಯತೆಯನ್ನು ಭದ್ರಪಡಿಸಲು ಈ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದ್ದು, ಇಂದಿನಿಂದಲೇ ರಾಜ್ಯಾದ್ಯಂತ ಹೊಸ ಕಾಯ್ದೆ ಜಾರಿಗೆ ಬಂದಿದೆ.







Comments