;
top of page

ಬಂಟ್ವಾಳ: ಕಾರಿಂಜೇಶ್ವರ ಇಳಿಯೂರು ವಿಷ್ಣುಮೂರ್ತಿ ದೇವಸ್ಥಾನಕ್ಕೆ ಸಿಡಿಲು; ಕೋಟ್ಯಾಂತರ ರೂಪಾಯಿ ನಷ್ಟ, ತಪ್ಪಿದ ಪ್ರಾಣಾಪಾಯ!

May 17
1 min read

ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಇತಿಹಾಸ ಪ್ರಸಿದ್ಧ ಕಾರಿಂಜೇಶ್ವರ ದೇವಸ್ಥಾನದ ಇಳಿಯೂರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದ ಪ್ರಾಕಾರಕ್ಕೆ ಭೀಕರ ಸಿಡಿಲು ಬಡಿದಿದೆ. ಸಮುದ್ರ ಮಟ್ಟದಿಂದ ಸುಮಾರು 800 ಅಡಿ ಎತ್ತರದ ಕಡಿದಾದ ಬೆಟ್ಟದ ತುದಿಯಲ್ಲಿರುವ ಈ ಐತಿಹಾಸಿಕ ದೇವಸ್ಥಾನಕ್ಕೆ ಸಂಜೆ ಭಾರಿ ಗಾಳಿ ಮಳೆಯ ನಡುವೆ ಸಿಡಿಲು ಅಪ್ಪಳಿಸಿದೆ.

ಸಿಡಿಲಿನ ತೀವ್ರತೆಗೆ ದೇವಸ್ಥಾನದ ಗರ್ಭಗುಡಿಯ ಮೇಲಿನ ಪ್ರಾಕಾರದ ಶಿಲಾ ಕಲ್ಲುಗಳು ಛಿದ್ರಗೊಂಡು ನೆಲಕ್ಕಪ್ಪಳಿಸಿವೆ. ಕೇವಲ ನಾಲ್ಕು ವರ್ಷಗಳ ಹಿಂದೆಯಷ್ಟೇ ನವೀಕರಣಗೊಂಡು ಬ್ರಹ್ಮಕಲಶೋತ್ಸವ ಕಂಡಿದ್ದ ಈ ದೇವಸ್ಥಾನದ ಗರ್ಭಗುಡಿಗೆ ಈಗ ಭಾರಿ ಹಾನಿಯಾಗಿದ್ದು, ಸುಮಾರು 1 ಕೋಟಿ ರೂಪಾಯಿಯಷ್ಟು ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.


ದೇವಸ್ಥಾನವು ಎತ್ತರದ ಗುಡ್ಡದ ಮೇಲಿದ್ದರೂ, ಸಿಡಿಲು ಬಡಿದ ಸಂದರ್ಭದಲ್ಲಿ ಗರ್ಭಗುಡಿ ಹಾಗೂ ಆವರಣದ ಸುತ್ತಮುತ್ತ ಭಕ್ತರಾಗಲಿ, ಸಾರ್ವಜನಿಕರಾಗಲಿ ಯಾರೂ ಇಲ್ಲದ ಕಾರಣ ದೊಡ್ಡ ಪ್ರಾಣಾಪಾಯವೊಂದು ತಪ್ಪಿದೆ. ದೇವರ ಗುಡಿಯ ಪುನರ್ ನವೀಕರಣಕ್ಕೆ ಮತ್ತೆ ಕೋಟ್ಯಾಂತರ ರೂಪಾಯಿ ವೆಚ್ಚವಾಗಲಿದೆ ಎಂದು ಹೇಳಲಾಗುತ್ತಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page