;
top of page

ಬೆದ್ರುಪಣೆ: ಆನೆಗಳ ದಾಳಿಗೆ ಮರಿಯಾನೆ ಬಲಿ?

  • May 25
  • 1 min read

ಅರಂತೋಡು ಗ್ರಾಮದ ಬೆದ್ರುಪಣೆ ಎಂಬಲ್ಲಿ ಸುಮಾರು ಒಂದು ವರ್ಷದ ಮರಿಯಾನೆಯೊಂದು ನಿಗೂಢವಾಗಿ ಸಾವನ್ನಪ್ಪಿದೆ. ಸ್ಥಳೀಯ ನಿವಾಸಿ ಅಶೋಕ್ ಎಂಬುವವರ ಖಾಸಗಿ ತೋಟದಲ್ಲಿ ಸೋಮವಾರ ಮುಂಜಾನೆ ಈ ದುರ್ಘಟನೆ ಬೆಳಕಿಗೆ ಬಂದಿದೆ. ಗಂಡಾನೆಗಳ ನಡುವೆ ನಡೆದ ಭೀಕರ ದಾಳಿಯೇ ಈ ಮರಿಯಾನೆಯ ಸಾವಿಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ.

ರಾತ್ರಿ ವೇಳೆ ತೋಟಕ್ಕೆ ಆನೆಗಳು ನುಗ್ಗಿದ್ದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಅವುಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದರು. ಆದರೆ, ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಆನೆಗಳ ಹಿಂಡಿನ ನಡುವೆ ಪರಸ್ಪರ ತೀವ್ರ ಕಿತ್ತಾಟ ನಡೆದಿರಬಹುದು ಎಂದು ಶಂಕಿಸಲಾಗಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿ ಮಂಜುನಾಥ್ ಎನ್. ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಿಯಾನೆಯ ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಸಾವಿಗೆ ನಿಖರವಾದ ಕಾರಣ ಏನೆಂಬುದು ಅಧಿಕೃತವಾಗಿ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page