;
top of page

ಬೆಂಗಳೂರಿನಲ್ಲೇ ಆರ್‌ಸಿಬಿ ಅಬ್ಬರ? ಚಿನ್ನಸ್ವಾಮಿ ಕ್ರೀಡಾಂಗಣ ಉಳಿಸಿಕೊಳ್ಳಲು ಫ್ರಾಂಚೈಸಿ ಒಲವು!

  • Writer: sathyapathanewsplu
    sathyapathanewsplu
  • 9 hours ago
  • 1 min read

ಬೆಂಗಳೂರು: ಐಪಿಎಲ್ ಅಭಿಮಾನಿಗಳಿಗೆ, ವಿಶೇಷವಾಗಿ ಆರ್‌ಸಿಬಿ (RCB) ಬೆಂಬಲಿಗರಿಗೆ ಶುಭ ಸುದ್ದಿಯೊಂದು ಕೇಳಿಬರುತ್ತಿದೆ. ಮುಂಬರುವ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ತವರು ಪಂದ್ಯಗಳನ್ನು ಎಂದಿನಂತೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿಯೇ ಆಡುವ ಇಂಗಿತ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

​ತಂಡಗಳ ತವರು ಮೈದಾನಗಳನ್ನು ಖಚಿತಪಡಿಸಲು ಬಿಸಿಸಿಐ (BCCI) ನೀಡಿದ್ದ ಜ. 27ರ ಗಡುವು ಮುಕ್ತಾಯಗೊಂಡಿದ್ದು, ಆರ್​​ಸಿಬಿ ತನ್ನ ಪಂದ್ಯಗಳನ್ನು ಬೆಂಗಳೂರಿನಲ್ಲೇ ಆಡುವುದಾಗಿ ತಿಳಿಸಿದೆ ಎನ್ನಲಾಗಿದೆ. ಕ್ರೀಡಾಂಗಣದ ಸುರಕ್ಷತೆ ಮತ್ತು ಇತರೆ ತಾಂತ್ರಿಕ ವಿಷಯಗಳ ಕುರಿತು ಫ್ರಾಂಚೈಸಿ ವ್ಯವಸ್ಥಾಪಕರು ಈಗಾಗಲೇ ರಾಜ್ಯ ಸರ್ಕಾರದೊಂದಿಗೆ ಸತತ ಸಂಪರ್ಕದಲ್ಲಿದ್ದಾರೆ. ಇಂದು ಅಥವಾ ನಾಳೆಯೊಳಗೆ ಸರ್ಕಾರದೊಂದಿಗೆ ಅಂತಿಮ ಸುತ್ತಿನ ಮಾತುಕತೆ ನಡೆಸಿ ಅಧಿಕೃತ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ. ಒಂದು ವೇಳೆ ಎಲ್ಲವೂ ಅಂದುಕೊಂಡಂತೆ ನಡೆದರೆ, 'ನಮ್ಮ ಬೆಂಗಳೂರು' ಮೈದಾನದಲ್ಲೇ ಮತ್ತೊಮ್ಮೆ ಆರ್‌ಸಿಬಿ ಆರ್ಭಟವನ್ನು ಕಣ್ತುಂಬಿಕೊಳ್ಳಬಹುದು.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page