;
top of page

ಇಂದು ವರ್ಷದ ಮೊದಲ ಚಂದ್ರ ಗ್ರಹಣ: ದೇವಸ್ಥಾನಗಳ ಪೂಜಾ ಸಮಯದಲ್ಲಿ ಬದಲಾವಣೆ

  • Mar 3
  • 1 min read

ಈ ವರ್ಷದ ಮೊದಲ ಕೇತುಗ್ರಸ್ತ ಚಂದ್ರ ಗ್ರಹಣವು ಇಂದು ಸಂಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರಮುಖ ದೇವಸ್ಥಾನಗಳ ಪೂಜಾ ಮತ್ತು ದರ್ಶನದ ಸಮಯದಲ್ಲಿ ಗಣನೀಯ ಬದಲಾವಣೆ ಮಾಡಲಾಗಿದೆ. ಗ್ರಹಣದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇವಾಲಯಗಳ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಂಡಿದೆ.

ಮಧ್ಯಾಹ್ನ 3 ಗಂಟೆಯಿಂದಲೇ ಗ್ರಹಣ ಪ್ರಕ್ರಿಯೆ ಆರಂಭವಾಗಲಿದ್ದರೂ, ಚಂದ್ರೋದಯದ ನಂತರ ಅಂದರೆ ಸಂಜೆ 6.26ಕ್ಕೆ ಗೋಚರಿಸಲಿದೆ. ಈ ಖಗೋಳ ವಿದ್ಯಮಾನವು ಸಂಜೆ 6.47ಕ್ಕೆ ಮುಕ್ತಾಯವಾಗಲಿದ್ದು, ಅಲ್ಲಿಯವರೆಗೆ ದೇವಸ್ಥಾನಗಳ ಗರ್ಭಗುಡಿಯನ್ನು ಮುಚ್ಚಲಾಗುವುದು ಹಾಗೂ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಗ್ರಹಣ ಮುಕ್ತಾಯವಾದ ನಂತರ ಅಂದರೆ ಸಂಜೆ 7 ಗಂಟೆಯ ಬಳಿಕವಷ್ಟೇ ದೇವಸ್ಥಾನಗಳನ್ನು ಶುಚಿಗೊಳಿಸಿ ವಿಶೇಷ ಪೂಜೆ-ಪುನಸ್ಕಾರಗಳನ್ನು ನೆರವೇರಿಸಲಾಗುತ್ತದೆ. ಭಕ್ತರು ಸಂಜೆಯ ನಂತರವಷ್ಟೇ ದೇವರ ದರ್ಶನ ಪಡೆಯಲು ಅವಕಾಶವಿದ್ದು, ಸಾರ್ವಜನಿಕರು ಈ ಸಮಯದ ಬದಲಾವಣೆಯನ್ನು ಗಮನಿಸಬೇಕೆಂದು ಸೂಚಿಸಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page