;
top of page

ಇನ್ಮುಂದೆ ಯಾವ ಚುನಾವಣೆಯಲ್ಲೂ ಸ್ಪರ್ಧಿಸಲ್ಲ: ಸಿದ್ದರಾಮಯ್ಯ ಬಾಂಬ್!

Aug 31
1 min read

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂಬರುವ ಯಾವುದೇ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದಿವಂಗತ ವೀರಣ್ಣನವರ ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ನಿರ್ಧಾರಕ್ಕೆ ವಯಸ್ಸಿನ ಕಾರಣಕ್ಕಿಂತ ಇಂದಿನ ದುಬಾರಿ ಚುನಾವಣಾ ವ್ಯವಸ್ಥೆಯೇ ಮುಖ್ಯ ಕಾರಣ ಎಂದಿದ್ದಾರೆ.


​"ಈಗ ಚುನಾವಣೆ ಎದುರಿಸಲು ಟನ್ ಗಟ್ಟಲೆ ಹಣ ಬೇಕು. ವ್ಯವಸ್ಥೆ ಸುಧಾರಿಸದಿದ್ದರೆ ಪ್ರಾಮಾಣಿಕವಾಗಿ ರಾಜಕಾರಣ ಮಾಡಲು ಸಾಧ್ಯವಿಲ್ಲ" ಎಂದು ಕಳವಳ ವ್ಯಕ್ತಪಡಿಸಿದರು. 1991ರ ಕೊಪ್ಪಳ ಲೋಕಸಭಾ ಸೋಲನ್ನು ನೆನಪಿಸಿಕೊಂಡ ಅವರು, ರಾಜಕಾರಣದಲ್ಲಿ ಸಕ್ರಿಯವಾಗಿರುತ್ತೇನೆ ಆದರೆ ಇನ್ಮುಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page