;
top of page

ಹಸು ವಧೆ ನಿಷೇಧ: ಸುಪ್ರೀಂಗೆ ತಮಿಳುನಾಡು ಮೇಲ್ಮನವಿ

  • Jul 2
  • 1 min read

ಬಕ್ರೀದ್ ಸೇರಿದಂತೆ ಯಾವುದೇ ದಿನಗಳಲ್ಲಿ ಹಸು ಮತ್ತು ಕರುಗಳ ವಧೆ ಮಾಡಬಾರದು ಎಂಬ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಪಶುಸಂಗೋಪನೆ ಇಲಾಖೆ ಕಾರ್ಯದರ್ಶಿ ಮೂಲಕ ಈ ಅರ್ಜಿ ಸಲ್ಲಿಕೆಯಾಗಿದೆ.

ಕೊಯಂಬತ್ತೂರಿನಲ್ಲಿ ಬಕ್ರೀದ್ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಹಸು ವಧೆ ತಡೆಯುವ ಕುರಿತು ಮಾತ್ರ ಮೂಲ ಅರ್ಜಿ ಇತ್ತು. ಆದರೆ, ಹೈಕೋರ್ಟ್ ತನ್ನ ವ್ಯಾಪ್ತಿ ಮೀರಿ ರಾಜ್ಯದಾದ್ಯಂತ ಹಸು ವಧೆಗೆ ಸಂಪೂರ್ಣ ನಿಷೇಧ ಹೇರಿದೆ ಎಂದು ಸರ್ಕಾರ ವಾದಿಸಿದೆ.

ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆಗಳು ಹಸು ವಧೆಯನ್ನು ನಿಯಂತ್ರಿಸುತ್ತವೆಯೇ ಹೊರತು ಪೂರ್ಣ ನಿಷೇಧಿಸುವುದಿಲ್ಲ. ಧಾರ್ಮಿಕ ವಿಷಯಗಳ ಚರ್ಚೆ ಅನಗತ್ಯವಾಗಿದ್ದು, ಹೈಕೋರ್ಟ್ ತೀರ್ಪಿಗೆ ತಡೆ ನೀಡಬೇಕೆಂದು ವಕೀಲ ಜಯಶ್ರೀ ನರಸಿಂಹನ್ ಸಲ್ಲಿಸಿದ ಅರ್ಜಿಯಲ್ಲಿ ಕೋರಲಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page