ಮೀನುಗಾರರ ವಹಿವಾಟು ಬಂದ್ಗೆ ಡಿ.ಕೆ.ಶಿವಕುಮಾರ್ ಕೆಂಡ: ಅಧಿಕಾರಿಗಳ ಅಮಾನತಿಗೆ ಸೂಚನೆ

ಮೀನುಗಾರಿಕೆ ಢಕ್ಕೆಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಬೋಟ್ ಏರಿ ಪರಿಶೀಲನೆ ನಡೆಸಿ, ಸ್ಥಳೀಯ ಮೀನುಗಾರರೊಂದಿಗೆ ಸಂವಾದ ನಡೆಸಿದರು.
ಆದರೆ, ಮುಖ್ಯಮಂತ್ರಿಗಳ ಭೇಟಿ ಹಿನ್ನೆಲೆಯಲ್ಲಿ ಢಕ್ಕೆಯಲ್ಲಿ ವ್ಯಾಪಾರ ವಹಿವಾಟುಗಳನ್ನು ಸಂಪೂರ್ಣ ಬಂದ್ ಮಾಡಿಸಿ, ಖಾಲಿಗೊಳಿಸಲಾಗಿತ್ತು. ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಡಿ.ಕೆ. ಶಿವಕುಮಾರ್, "ಅನೇಕ ಸ್ಥಳೀಯ ಹಾಗೂ ಹೊರರಾಜ್ಯದ ಕಾರ್ಮಿಕರು ಇದನ್ನೇ ನಂಬಿ ಬದುಕುತ್ತಿದ್ದಾರೆ. ನಮ್ಮ ಭೇಟಿಯಿಂದ ಅವರ ದೈನಂದಿನ ಜೀವನ ಮತ್ತು ವ್ಯಾಪಾರಕ್ಕೆ ಅಡ್ಡಿಯಾಗಬಾರದಿತ್ತು" ಎಂದರು.
ಈ ಘಟನೆ ಕುರಿತು ತಕ್ಷಣ ತನಿಖೆ ನಡೆಸಿ, ವ್ಯಾಪಾರ ಬಂದ್ ಮಾಡಿಸಿದ ಜವಾಬ್ದಾರಿಯುತ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್ಗೆ ಸ್ಥಳದಲ್ಲೇ ಖಡಕ್ ಸೂಚನೆ ನೀಡಿದರು.







Comments