ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿತ; ಎಂಟು ಮಂದಿಗೆ ಗಾಯ
- Apr 25
- 1 min read

ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿನ ಪುಚ್ಚೆಮೊಗರು ಬಾವದಬೈಲಿನಲ್ಲಿ ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿದು ಎಂಟು ಮಂದಿ ಗಾಯಗೊಂಡಿದ್ದಾರೆ. ತಾಕೋಡೆ ಬರ್ಕೆ ಧರ್ಮನೇಮಕ್ಕೆ ದೈವದ ಭಂಡಾರವನ್ನು ಪಲ್ಲಕ್ಕಿಯಲ್ಲಿ ಹೊತ್ತು ಸಾಗಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಸಂಕವು ಏಕಾಏಕಿ ಕುಸಿದ ಪರಿಣಾಮ ಪಲ್ಲಕ್ಕಿ ಉರುಳಿ ಬಿದ್ದಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಅವಘಡದಲ್ಲಿ ಪಲ್ಲಕ್ಕಿಯಲ್ಲಿದ್ದ ದೈವದ ಮೊಗಮೂರ್ತಿ ಹಾಗೂ ಇತರ ಧಾರ್ಮಿಕ ಪರಿಕರಗಳಿಗೆ ಹಾನಿಯುಂಟಾಗಿದೆ. ಪಲ್ಲಕ್ಕಿ ಹೊತ್ತವರು ಮತ್ತು ಮೆರವಣಿಗೆಯಲ್ಲಿದ್ದ ಭಕ್ತರು ನೀರಿನಲ್ಲಿ ಬಿದ್ದಿದ್ದು, ಸ್ಥಳೀಯರ ಸಹಾಯದಿಂದ ರಕ್ಷಣಾ ಕಾರ್ಯ ನಡೆಸಲಾಯಿತು. ಧಾರ್ಮಿಕ ಕಾರ್ಯಕ್ರಮದ ಸಂಭ್ರಮದಲ್ಲಿದ್ದ ಭಕ್ತರಲ್ಲಿ ಈ ಘಟನೆಯು ಆತಂಕ ಮತ್ತು ವಿಷಾದವನ್ನುಂಟು ಮಾಡಿದೆ.







Comments