;
top of page

ದಾವಣಗೆರೆ: ಪ್ಲಾಸ್ಟಿಕ್ ಕವರ್ ಕಚ್ಚಿ ಸಾಕುನಾಯಿ ಭೀಕರ ಸ್ಫೋಟಕ್ಕೆ ಬಲಿ

  • Jun 22
  • 1 min read

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ನಲ್ಕುದರೆ ಗ್ರಾಮದಲ್ಲಿ ರಸ್ತೆಯಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಕವರ್ ಕಚ್ಚುತ್ತಿದ್ದಂತೆ ಭೀಕರ ಸ್ಫೋಟ ಸಂಭವಿಸಿ ಸಾಕುನಾಯಿಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ.

ಮಾಲೀಕ ರುದ್ರೇಶ್ ಅವರೊಂದಿಗೆ ಜಮೀನಿಗೆ ತೆರಳುತ್ತಿದ್ದ ನಾಯಿ, ರಸ್ತೆ ಬದಿಯ ಪ್ಲಾಸ್ಟಿಕ್ ಕವರ್‌ನಲ್ಲಿ ಆಹಾರವಿದೆ ಎಂದು ಭಾವಿಸಿ ಕಚ್ಚಿದೆ. ತಕ್ಷಣವೇ ಸ್ಫೋಟ ಸಂಭವಿಸಿದ್ದು, ನಾಯಿಯ ಮುಖ ಛಿದ್ರಗೊಂಡು ಮೃತಪಟ್ಟಿದೆ.

ಸ್ಫೋಟದ ಸದ್ದು ಒಂದು ಕಿಲೋಮೀಟರ್‌ವರೆಗೆ ಕೇಳಿಸಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ಕಾಡುಹಂದಿ ನಿಯಂತ್ರಣಕ್ಕೆ ಇಟ್ಟಿದ್ದ ಸಿಡಿಮದ್ದು ಇದಾಗಿರಬಹುದು ಎಂದು ಶಂಕಿಸಲಾಗಿದ್ದು, ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page