;
top of page

ಪುತ್ತೂರು : ಕ್ರೀಡಾಕೂಟದ ವೇಳೆ ಹೃದಯಾಘಾತ – ರವಿ ಕುಮಾರ್ ಕಲ್ಕಾರ್ ನಿಧನ

  • 3 days ago
  • 1 min read

ಪುತ್ತೂರು: ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ದುರ್ಘಟನೆ ಪುತ್ತೂರಿನ ಶಾಂತಿಗೋಡಿನಲ್ಲಿ ನಡೆದಿದೆ. ಮೃತರನ್ನು 48 ವರ್ಷದ ರವಿ ಕುಮಾರ್ ಕಲ್ಕಾರ್ ಎಂದು ಗುರುತಿಸಲಾಗಿದೆ.

ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ವೇಳೆ ರವಿ ಅಕಸ್ಮಾತ್ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆಂದು ತಿಳಿದು ಬಂದಿದೆ.

ರವಿ ಕಲ್ಕಾರ್ ಹಲವು ವರ್ಷಗಳ ಕಾಲ ವಿದೇಶದಲ್ಲಿ ಉದ್ಯೋಗ ನಿರ್ವಹಿಸಿ ಬಳಿಕ ಸ್ವಗ್ರಾಮ ಶಾಂತಿಗೋಡು ಕಲ್ಕಾರ್ ಪ್ರದೇಶದಲ್ಲಿ ಕೃಷಿಯಲ್ಲಿ ತೊಡಗಿಕೊಂಡಿದ್ದರು. ಸಾಮಾಜಿಕ ಹಾಗೂ ಸಂಘಟನೆ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು ಪುತ್ತೂರು ತಾಲೂಕು ಬಿಲ್ಲವ ಸಂಘದ ವಿದ್ಯಾನಿಧಿ ಸಂಚಾಲಕರಾಗಿ, ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಯುವವಾಹಿನಿ ಪುತ್ತೂರು ಕಲೆ ಮತ್ತು ಸಾಹಿತ್ಯ ವಿಭಾಗದ ನಿರ್ದೇಶಕರಾಗಿ, ಕೂಡುರಸ್ತೆ ಮುಂಡೋಡಿ ನವಶಕ್ತಿ ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page