ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ಹೊಸ ಪೊಲೀಸ್ ಠಾಣೆ ಮಂಜೂರು
- Mar 6
- 1 min read

ರಾಜ್ಯ ಸರ್ಕಾರವು ಕಾನೂನು ಸುವ್ಯವಸ್ಥೆ ಕಾಪಾಡಲು 12 ನೂತನ ಪೊಲೀಸ್ ಠಾಣೆಗಳ ಸ್ಥಾಪನೆಗೆ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್ನಲ್ಲಿ ಈ ಘೋಷಣೆ ಮಾಡಿದ್ದು, ಇದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ ಮತ್ತು ಸಜಿಪನಡು ಎಂಬಲ್ಲಿ ಎರಡು ಹೊಸ ಠಾಣೆಗಳು ಆರಂಭವಾಗಲಿವೆ.

ಈ ನೂತನ ಠಾಣೆಗಳ ಸ್ಥಾಪನೆಯಿಂದ ಸ್ಥಳೀಯವಾಗಿ ಅಪರಾಧ ನಿಯಂತ್ರಣಕ್ಕೆ ಹೆಚ್ಚಿನ ಬಲ ಸಿಗಲಿದೆ. ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಿರುವ ಸರ್ಕಾರ, ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸಲು ಈ ಕ್ರಮ ಕೈಗೊಂಡಿದೆ. ದಕ್ಷಿಣ ಕನ್ನಡದ ಈ ಭಾಗದ ಜನರಿಗೆ ಇನ್ನು ಮುಂದೆ ಪೊಲೀಸ್ ಸೇವೆಗಳು ಸುಲಭವಾಗಿ ಲಭ್ಯವಾಗಲಿವೆ.







Comments