;
top of page

ಇಂದು (ಏ. 01)ಎಣ್ಮೂರು ಶ್ರೀ ನಾಗಬ್ರಹ್ಮ ಕೋಟಿ-ಚೆನ್ನಯ್ಯ ಆದಿ ಬೈದರ್ಕಳ ನೇಮೋತ್ಸವ

  • Apr 1
  • 1 min read

​ಇತಿಹಾಸ ಪ್ರಸಿದ್ಧ ಕಾರಣಿಕ ಶಕ್ತಿಗಳಾದ ಶ್ರೀ ನಾಗಬ್ರಹ್ಮ ಕೋಟಿ ಚೆನ್ನಯ್ಯ ಆದಿ ಬೈದರುಗಳ ನೇಮೋತ್ಸವವು ಏಪ್ರಿಲ್ 1ರಂದು ಎಣ್ಣೂರು ಕಟ್ಟಬೀಡು ಮತ್ತು ಗರಡಿಯಲ್ಲಿ ಅತ್ಯಂತ ಸಡಗರದಿಂದ ನಡೆಯಿತು. ಆನುವಂಶಿಕ ಆಡಳಿತದಾರರಾದ ಕಟ್ಟಬೀಡು ರಾಮಕೃಷ್ಣ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ನಾಗ ತಂಬಿಲ, ಮುಹೂರ್ತ ತೋರಣ ಮತ್ತು ಭಂಡಾರ ಏರುವಿಕೆ ಶಾಸ್ತ್ರೋಕ್ತವಾಗಿ ಜರುಗಿದವು. ಈ ಪುಣ್ಯ ಕಾರ್ಯಕ್ರಮಕ್ಕೆ ಜಿಲ್ಲೆ ಹಾಗೂ ಹೊರರಾಜ್ಯಗಳಿಂದ ಸಾವಿರಾರು ಭಕ್ತರು ಆಗಮಿಸಿ ದೈವಗಳ ದರ್ಶನ ಪಡೆದರು.

​ರಾತ್ರಿ ದೈವಗಳ ಗರಡಿ ಇಳಿಯುವಿಕೆ ಮತ್ತು ಕಿನ್ನಿದಾರು ದರ್ಶನ ರಂಗಸ್ಥಳದಲ್ಲಿ ಸಾರವತ್ತಾಗಿ ನಡೆಯಲಿದೆ. ಬೆಳಗಿನ ಜಾವ ಕಟ್ಟಬೀಡಿಗೆ ಹಾಲು ಕುಡಿಯಲು ಬರುವ ದೈವಗಳು, ಅಲ್ಲಿ ಕಾಣಿಕೆ ಸ್ವೀಕರಿಸಿ ಬಳಿಕ ಕೋಟಿ-ಚೆನ್ನಯರ ದರ್ಶನ ನೀಡಲಿವೆ. ರಂಗಸ್ಥಳದಲ್ಲಿ ಬೈದೆರುಗಳ ಸೇಟು ಮತ್ತು ತುಲಾಭಾರ ಸೇವೆಗಳು ನಡೆಯಲಿದ್ದು, ಭಕ್ತರಿಗಾಗಿ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ. ಸಾಂಪ್ರದಾಯಿಕ ಕಟ್ಟಲೆಗಳೊಂದಿಗೆ ಜರುಗುವ ಈ ನೇಮೋತ್ಸವವು ಭಕ್ತರಲ್ಲಿ ಧಾರ್ಮಿಕ ಶ್ರದ್ಧೆಯನ್ನು ಇಮ್ಮಡಿಗೊಳಿಸಿದೆ

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page