ಗೃಹಲಕ್ಷ್ಮಿ ಫಲಾನುಭವಿಗಳಿಗೆ ಸಿಹಿಸುದ್ದಿ: ಶೀಘ್ರವೇ ಎರಡು ಕಂತಿನ ಹಣ ಬಿಡುಗಡೆ!
- sathyapathanewsplu
- 58 minutes ago
- 1 min read

ರಾಜ್ಯದ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಯೊಂದನ್ನು ನೀಡಿದ್ದಾರೆ. ಈಗಾಗಲೇ 24 ಕಂತುಗಳನ್ನು ಯಶಸ್ವಿಯಾಗಿ ವಿತರಿಸಲಾಗಿದ್ದು, ಈಗ ಬಾಕಿ ಇರುವ ಎರಡು ಕಂತುಗಳ ಹಣವನ್ನು ಒಟ್ಟಾಗಿ ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಇದರಿಂದ ಪ್ರತಿ ಮಹಿಳೆಗೆ ಒಟ್ಟು 52 ಸಾವಿರ ರೂಪಾಯಿ ತಲುಪಿದಂತಾಗುತ್ತದೆ.
ಒಂದು ವೇಳೆ ನಿಮಗೆ ಹಣ ಬಾರದೆ ಇದ್ದಲ್ಲಿ, ಇನ್ನು ಮುಂದೆ ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಇಲಾಖೆಯು '181' ಸಹಾಯವಾಣಿ ಸಂಖ್ಯೆಯನ್ನು ಪ್ರಕಟಿಸಿದೆ. ಇ-ಕೆವೈಸಿ ಸಮಸ್ಯೆ ಅಥವಾ ತಾಂತ್ರಿಕ ದೋಷಗಳಿಂದ ಹಣ ಸ್ಥಗಿತಗೊಂಡಿದ್ದರೆ, ಈ ಸಂಖ್ಯೆಗೆ ಕರೆ ಮಾಡಿ ದೂರು ನೀಡಬಹುದು. ಅಧಿಕಾರಿಗಳು ಕೂಡಲೇ ಪರಿಶೀಲಿಸಿ ಸಮಸ್ಯೆ ಬಗೆಹರಿಸಲಿದ್ದಾರೆ.






Comments