ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿ: ಕ್ಷಿಪಣಿಗಳ ಮೇಲೆ 'ಭಾರತಕ್ಕೆ ಧನ್ಯವಾದ' ಸಂದೇಶ ವೈರಲ್
- Apr 1
- 1 min read

ಇಸ್ರೇಲ್ ಮೇಲೆ ಇರಾನ್ ಇತ್ತೀಚೆಗೆ ನಡೆಸಿದ ಕ್ಷಿಪಣಿ ದಾಳಿಯ ಬೆನ್ನಲ್ಲೇ ಒಂದು ಕುತೂಹಲಕಾರಿ ಬೆಳವಣಿಗೆ ಕಂಡುಬಂದಿದೆ. ದಾಳಿಗೆ ಬಳಸಲಾದ ಕ್ಷಿಪಣಿಗಳ ಮೇಲೆ 'ಭಾರತದ ಜನರಿಗೆ ಧನ್ಯವಾದಗಳು' ಎಂದು ಬರೆಯಲಾಗಿದ್ದು, ಮುಂಬೈನಲ್ಲಿರುವ ಇರಾನ್ ಕಾನ್ಸುಲೇಟ್ ಕಚೇರಿ ಈ ಫೋಟೋಗಳನ್ನು ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಹಂಚಿಕೊಂಡಿದೆ. ಭಾರತದ ಜೊತೆಗೆ ಪಾಕಿಸ್ತಾನ, ಸ್ಪೇನ್ ಮತ್ತು ಜರ್ಮನಿ ದೇಶಗಳಿಗೂ ಇರಾನ್ ಈ ಮೂಲಕ ಕೃತಜ್ಞತೆ ಸಲ್ಲಿಸಿದೆ.

ಮತ್ತೊಂದೆಡೆ, ಆರ್ಥಿಕ ಮತ್ತು ವ್ಯೂಹಾತ್ಮಕ ದೃಷ್ಟಿಯಿಂದ ಮಹತ್ವದ ಹೊರ್ಮುಜ್ ಜಲಸಂಧಿಯನ್ನು ಭಾರತ, ಚೀನಾ ಮತ್ತು ರಷ್ಯಾ ಸೇರಿದಂತೆ ಐದು ರಾಷ್ಟ್ರಗಳಿಗೆ ಮುಕ್ತಗೊಳಿಸಿರುವುದಾಗಿ ಇರಾನ್ ವಿದೇಶಾಂಗ ಸಚಿವ ಸೈಯದ್ ಅಬ್ಬಾಸ್ ಅರಾಗ್ನಿ ತಿಳಿಸಿದ್ದಾರೆ. ಈ ದೇಶಗಳ ಸರಕು ಸಾಗಣೆ ಹಡಗುಗಳಿಗೆ ಸುರಕ್ಷಿತ ಹಾದಿ ಒದಗಿಸುವ ಭರವಸೆಯನ್ನು ಇರಾನ್ ನೀಡಿದ್ದು, ಅಂತರರಾಷ್ಟ್ರೀಯ ಮಟ್ಟದಲ್ಲಿ ಇದು ಭಾರಿ ಚರ್ಚೆಗೆ ಗ್ರಾಸವಾಗಿದೆ.







Comments