ಕಡಬ : ಮರ್ದಾಳದಲ್ಲಿ ಅವಘಡ: ಚರಂಡಿಗೆ ಉರುಳಿದ ಸಿಮೆಂಟ್ ಇಟ್ಟಿಗೆ ತುಂಬಿದ ಲಾರಿ

ಕಡಬ, ಆ.10: ಮೆಲ್ಕಾರ್ನಿಂದ ಸುಬ್ರಹ್ಮಣ್ಯಕ್ಕೆ ಸಿಮೆಂಟ್ ಇಟ್ಟಿಗೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಬಿದ್ದ ಘಟನೆ ರವಿವಾರ ಕಡಬ ಸಮೀಪದ ಮರ್ದಾಳದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿ ರಸ್ತೆ ಬದಿಗೆ ಚಲಿಸಿ ಚರಂಡಿಗೆ ಬಿದ್ದಿದೆ. ಅದೃಷ್ಟವಶಾತ್ ಲಾರಿ ಚಾಲಕ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.
ಘಟನೆಯ ಬಳಿಕ ಲಾರಿಯಲ್ಲಿದ್ದ ಸಿಮೆಂಟ್ ಇಟ್ಟಿಗೆಗಳನ್ನು ಮತ್ತೊಂದು ಲಾರಿಗೆ ಸ್ಥಳಾಂತರಿಸಿ ಸುಬ್ರಹ್ಮಣ್ಯಕ್ಕೆ ಕಳುಹಿಸಲಾಯಿತು. ಬಳಿಕ ಕ್ರೇನ್ನ್ನು ಸ್ಥಳಕ್ಕೆ ಕರೆಸಿ ಚರಂಡಿಗೆ ಬಿದ್ದಿದ್ದ ಲಾರಿಯನ್ನು ಮೇಲಕ್ಕೆತ್ತಲಾಯಿತು.
ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.







Comments