;
top of page

ಖಿನ್ನತೆಗೆ ಬಲಿಯಾಯಿತೇ ಮತ್ತೊಂದು ಜೀವ? ಕಡಬದ ಯುವಕನ ದುರಂತ ಅಂತ್ಯ

  • Apr 16
  • 1 min read

ಕಡಬದ ಪುಳಿಕುಕ್ಕು ಸಮೀಪ ಮಡಪ್ಪಾಡಿ ಗ್ರಾಮದ ಕಿಶನ್ ಎ ಹೆಚ್ (32) ಎಂಬ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗಾರಿನ ಬ್ಯಾಂಕೊಂದರಲ್ಲಿ ಲೋನ್ ಆಫೀಸರ್ ಆಗಿದ್ದ ಇವರು, ಕಳೆದ ಕೆಲವು ಸಮಯದಿಂದ ತೀವ್ರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಮಾರ್ಚ್ 21ರಂದು ವಿಷ ಸೇವಿಸಿದ್ದ ಇವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸುಮಾರು 20 ದಿನಗಳ ಕಾಲ ಸಾವು ಬದುಕಿನ ನಡುವೆ ಹೋರಾಡಿದ ಕಿಶನ್, ಏಪ್ರಿಲ್ 14ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಮೃತರ ಸಹೋದರ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page