ಕಾರವಾರ: ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್; 24 ಮೀನುಗಾರರ ಸಾಹಸಿಕ ರಕ್ಷಣೆ!

ಕಾರವಾರ: ಇಲ್ಲಿನ ಅಂಜದೀವ್ ದ್ವೀಪದ ಸಮೀಪ ಮೀನುಗಾರಿಕೆಗೆ ತೆರಳಿದ್ದ ಬೆಳಂಬರ್ ಮೂಲದ ನೀಲಕಂಠ ಖಾರ್ವಿ ಅವರಿಗೆ ಸೇರಿದ 'ಶ್ರೀ ಮಾತಾ' ಎಂಬ ಮೀನುಗಾರಿಕಾ ಬೋಟ್ ಅರಬ್ಬಿ ಸಮುದ್ರದಲ್ಲಿ ಅವಘಡಕ್ಕೀಡಾಗಿ ಮುಳುಗಡೆಯಾಗಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸಮೀಪದಲ್ಲಿದ್ದ ಐದಾರು ಬೋಟ್ಗಳ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ, ಹಗ್ಗದ ನೆರವಿನಿಂದ ಬೋಟ್ನಲ್ಲಿದ್ದ ಎಲ್ಲಾ 24 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಬೋಟ್ ಅನ್ನು ಉಳಿಸಲು ಯತ್ನಿಸಿದರೂ ಅದು ಸಂಪೂರ್ಣವಾಗಿ ಸಮುದ್ರದ ಪಾಲಾಗಿದೆ. ಘಟನೆಯಲ್ಲಿ ಸುಮಾರು 50 ಲಕ್ಷ ರೂಪಾಯಿಗೂ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.







Comments