ರಾಜ್ಯದಲ್ಲಿ ಗುಟ್ಕಾ–ಪಾನ್ ಮಸಾಲಾ ನಿಷೇಧ ಆದೇಶಕ್ಕೆ ಬ್ರೇಕ್: ಎರಡೇ ದಿನಕ್ಕೆ ವಾಪಸ್ ಪಡೆಯಲು ಸಿಎಂ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಹೇರಲಾಗಿದ್ದ ಒಂದು ವರ್ಷದ ನಿಷೇಧ ಆದೇಶವನ್ನು ಇದೀಗ ವಾಪಸ್ ಪಡೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಕೆಲವೇ ದಿನಗಳ ಹಿಂದೆ ಆಹಾರ ಸುರಕ್ಷತಾ ಆಯುಕ್ತರು ರಾಜ್ಯಾದ್ಯಂತ ತಂಬಾಕು ಹಾಗೂ ನಿಕೋಟಿನ್ ಒಳಗೊಂಡ ಗುಟ್ಕಾ ಮತ್ತು ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ದಾಸ್ತಾನು, ವಿತರಣೆ, ಸಾಗಣೆ ಹಾಗೂ ಮಾರಾಟವನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿದ್ದರು.
ಆದರೆ, ಈ ಆದೇಶವನ್ನು ತಮ್ಮ ಗಮನಕ್ಕೆ ತರದೆ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ನಿಷೇಧದಿಂದ ಪಾನ್ ಮಸಾಲಾ ಉತ್ಪನ್ನಗಳಿಗೆ ಸಂಬಂಧಿಸಿದ ಬೆಳೆ ಬೆಳೆಯುವ ರೈತರು ಹಾಗೂ ವ್ಯಾಪಾರ ವಲಯದವರಿಗೆ ಆರ್ಥಿಕ ನಷ್ಟ ಉಂಟಾಗುವ ಸಾಧ್ಯತೆ ಇದೆ ಎಂಬ ಕಾರಣವನ್ನು ಸಿಎಂ ಮುಂದಿಟ್ಟಿದ್ದಾರೆ ಎಂದು ವರದಿಯಾಗಿದೆ.
ಹೀಗಾಗಿ, ಈಗಾಗಲೇ ಹೊರಡಿಸಿರುವ ನಿಷೇಧ ಆದೇಶವನ್ನು ಕೂಡಲೇ ಹಿಂಪಡೆಯುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಇದರಿಂದ ರಾಜ್ಯದಲ್ಲಿ ಜಾರಿಯಾಗಿದ್ದ ಗುಟ್ಕಾ–ಪಾನ್ ಮಸಾಲಾ ನಿಷೇಧದ ಭವಿಷ್ಯದ ಬಗ್ಗೆ ಮತ್ತೊಮ್ಮೆ ಚರ್ಚೆ ಆರಂಭವಾಗಿದೆ.







Comments