ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿ ಭರ್ತಿ, ಸ್ನಾನಘಟ್ಟ ಮುಳುಗಡೆ – ಭಕ್ತರಿಗೆ ಪರ್ಯಾಯ ಸ್ನಾನದ ವ್ಯವಸ್ಥೆ

ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಸುತ್ತಮುತ್ತಲಿನ ಪರಿಸರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕುಮಾರಧಾರ ನದಿಯಲ್ಲಿ ನೀರಿನ ಮಟ್ಟ ಹಠಾತ್ತನೆ ಏರಿಕೆಯಾಗಿದೆ. ನದಿಯ ಭಾರಿ ಹರಿವಿಗೆ ಮುಖ್ಯ ಸ್ನಾನಘಟ್ಟವು ಸಂಪೂರ್ಣವಾಗಿ ಮುಳುಗಡೆಯಾಗಿದ್ದು, ಅಲ್ಲಿದ್ದ ಶೌಚಾಲಯ ಹಾಗೂ ಡ್ರೆಸ್ಸಿಂಗ್ ರೂಮ್ಗಳು ನೀರಿನಲ್ಲಿ ಜಲಾವೃತಗೊಂಡಿವೆ.

ನದಿಯಲ್ಲಿ ನೀರು ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿರುವ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ಭಕ್ತಾದಿಗಳಿಗೆ ನದಿಯಲ್ಲಿ ಇಳಿದು ತೀರ್ಥಸ್ನಾನ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ನದಿಯ ದಂಡೆಗೆ ಬೇಲಿ ಅಳವಡಿಸಲಾಗಿದ್ದು, ಪೊಲೀಸ್ ಹೆಲ್ಪ್ಲೈನ್ ಸೆಂಟರ್ ಮೂಲಕ ಭಕ್ತರಿಗೆ ನಿರಂತರ ಜಾಗರೂಕತೆಯ ಸಂದೇಶಗಳನ್ನು ನೀಡಲಾಗುತ್ತಿದೆ.
ನದಿಗೆ ಇಳಿಯಲು ತಡೆಯಿದ್ದರೂ ದೂರದೂರುಗಳಿಂದ ಆಗಮಿಸುವ ಭಕ್ತಾದಿಗಳಿಗೆ ತೊಂದರೆಯಾಗದಂತೆ ಸ್ನಾನಘಟ್ಟದ ಸುರಕ್ಷಿತ ಎತ್ತರದ ಪ್ರದೇಶದಲ್ಲಿ ದೊಡ್ಡ ಡ್ರಮ್ಗಳ ವ್ಯವಸ್ಥೆ ಮಾಡಲಾಗಿದೆ. ಮೋಟಾರ್ ಮೂಲಕ ನದಿಯ ಪವಿತ್ರ ನೀರನ್ನು ಈ ಡ್ರಮ್ಗಳಿಗೆ ತುಂಬಿಸಲಾಗುತ್ತಿದ್ದು, ಭಕ್ತರು ಸುರಕ್ಷಿತವಾಗಿ ಚೊಂಬುಗಳ ಮೂಲಕ ನೀರೆರೆಚಿಕೊಂಡು ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ.







Comments