ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಧಾನಿ ಮೋದಿಯವರ ಜನ್ಮದಿನಾಚರಣೆ: ಮಹಾಪೂಜೆ ಸೇವೆ

ಸುಬ್ರಹ್ಮಣ್ಯ: ದೇಶದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ಅವರ 25 ವರ್ಷಗಳ ಸುದೀರ್ಘ ಸಾರ್ವಜನಿಕ ಸೇವೆಯ ಅಂಗವಾಗಿ, Kukke ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಹಾಪೂಜೆ ಸೇವೆ ನೆರವೇರಿಸಲಾಯಿತು. ಬಲಶಾಲಿ ಮತ್ತು 'ಆತ್ಮನಿರ್ಭರ ಭಾರತ' ನಿರ್ಮಾಣಕ್ಕಾಗಿ ಶ್ರಮಿಸುತ್ತಿರುವ ಪ್ರಧಾನಿಯವರ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ನಿರಂತರ ದೇಶಸೇವೆಗಾಗಿ ದೇವರಲ್ಲಿ ಪ್ರಾರ್ಥಿಸಲಾಯಿತು.
ಈ ಶುಭ ಸಂದರ್ಭದಲ್ಲಿ ಕುಕ್ಕೆ ದೇವಸ್ಥಾನದ ಮಾಜಿ ವ್ಯವಸ್ಥಾಪನ ಸಮಿತಿ ಸದಸ್ಯರಾದ ಶ್ರೀಮತಿ ವನಜ. ವಿ ಭಟ್, ಶ್ರೀಮತಿ ಶೋಭಾ ಗಿರಿಧರ್, ಹಿಂದುಳಿದ ವರ್ಗಗಳ ಮೋರ್ಚಾದ ಸುಳ್ಯ ಮಂಡಲ ಅಧ್ಯಕ್ಷ ಗಿರೀಶ್ ಆಚಾರ್ಯ ಪೈಲಾಜೆ, ಎಲ್.ಡಿ. ಬ್ಯಾಂಕ್ ನಿರ್ದೇಶಕರಾದ ಶ್ರೀಕುಮಾರ್ ಬಿಲದ್ವಾರ, ಅಚ್ಯುತ ಗೌಡ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸುಜಾತಾ ಧನಂಜಯ, ಭಾರತಿ ದಿನೇಶ್, ಹಿರಿಯ ನಾಯಕರಾದ ಈಶ್ವರಗೌಡ ಅರಂಪಾಡಿ, ಕಿರಣ್ ಫೈಲಾಜೆ, ಯಶವಂತ ಕೊಪ್ಪಲದದ್ದೆ, ಅಜಿತ್ ಕಲ್ಲೇರಿ, ರಮೇಶ್ ಕುಮಾರ್, ವಿಎಚ್ಪಿ ಕಾರ್ಯದರ್ಶಿ ರಾಧಾಕೃಷ್ಣ ಆರು ಹಾಗೂ ರೋಹಿತ್ ಕುಲ್ಕುಂದ ಉಪಸ್ಥಿತರಿದ್ದರು.







Comments