ಮಲೆನಾಡು-ಕರಾವಳಿಯಲ್ಲಿ ಮುಂದುವರಿದ ವರುಣನ ಆರ್ಭಟ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಕಾಫಿನಾಡಿನಲ್ಲಿ ನಿರಂತರ ಮಳೆಯಿಂದಾಗಿ ಕೊಪ್ಪ ಮತ್ತು ಶೃಂಗೇರಿ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಭನ್ವರ್ ಸಿಂಗ್ ಆದೇಶಿಸಿದ್ದಾರೆ. ತುಂಗಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ತೀರದ ಜನರಿಗೆ ಎಚ್ಚರಿಕೆ ನೀಡಲಾಗಿದೆ.
ಮತ್ತೊಂದೆಡೆ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರು ಮಂಗಳೂರು, ಬಂಟ್ವಾಳ, ಉಳ್ಳಾಲ ಸೇರಿದಂತೆ ವಿವಿಧ ತಾಲೂಕುಗಳಲ್ಲಿ 10ನೇ ತರಗತಿಯವರೆಗೆ ಹಾಗೂ ಪುತ್ತೂರು, ಸುಳ್ಯ ಭಾಗಗಳಲ್ಲಿ ದ್ವಿತೀಯ ಪಿಯುಸಿ, ಐಟಿಐ, ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಸಾರ್ವಜನಿಕರು ಹಾಗೂ ಪ್ರವಾಸಿಗರು ಜಲಪಾತ ಮತ್ತು ನದಿ ಪಾತ್ರಗಳಿಗೆ ತೆರಳದಂತೆ ಜಿಲ್ಲಾಡಳಿತ ಸೂಚಿಸಿದೆ.







Comments