;
top of page

ಮನ್ ಕೀ ಬಾತ್: ಕರ್ನಾಟಕದ ನಿಂಗಮ್ಮ, ಚಿಕ್ಕಮಗಳೂರಿನ ರೈತರ ಸಾಧನೆಗೆ ಪ್ರಧಾನಿ ಮೋದಿ ಶ್ಲಾಘನೆ

Aug 30
1 min read

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ನವೀನ ಆಲೋಚನೆಗಳು ಹಾಗೂ ಕರ್ನಾಟಕದ ಯಶೋಗಾಥೆಗಳನ್ನು ವಿಶೇಷವಾಗಿ ಪ್ರಸ್ತಾಪಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

‘ಪಿಎಂ ಸ್ವನಿಧಿ’ ಯೋಜನೆಯಡಿ ಸಾಲ ಪಡೆದು ಸ್ವಾವಲಂಬಿ ಬದುಕು ಕಟ್ಟಿಕೊಂಡ ಬೆಂಗಳೂರಿನ ಬೀದಿಬದಿ ವ್ಯಾಪಾರಿ ನಿಂಗಮ್ಮ ಅವರ ಸಾಧನೆಯನ್ನು ಮೋದಿ ಶ್ಲಾಘಿಸಿದರು. ಹಾಗೆಯೇ, ಕಾಫಿ ತೋಟಗಳ ನಡುವೆ ಪರ್ಯಾಯ ಬೆಳೆಯಾಗಿ ಅವಕಾಡೊ ಬೆಳೆದು ಯಶಸ್ಸು ಕಂಡ ಚಿಕ್ಕಮಗಳೂರಿನ ರೈತರ ನೂತನ ಕೃಷಿ ಪದ್ಧತಿಯನ್ನು ಪ್ರಶಂಸಿದರು.

ಭಾರತದ ರಾಜವಂಶಗಳ ಇತಿಹಾಸ ತಿಳಿಸುವ ‘Bharat Rajya’ ವೆಬ್‌ಸೈಟ್, ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣದ ಅಗತ್ಯ ಹಾಗೂ ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ 8 ಕೋಟಿ ಸೆಲ್ಫಿ ಅಪ್‌ಲೋಡ್ ಆದ ಯಶಸ್ಸನ್ನು ಮೋದಿ ಉಲ್ಲೇಖಿಸಿದರು. ಜೊತೆಗೆ ‘ಮಿಷನ್ ಶಕ್ತಿ ಸ್ಯಾಟ್’ ಅಡಿಯಲ್ಲಿ ಉಪಗ್ರಹ ನಿರ್ಮಿಸುತ್ತಿರುವ ಉತ್ತರ ಪ್ರದೇಶದ 100 ವಿದ್ಯಾರ್ಥಿನಿಯರ ಸಾಧನೆಯನ್ನು ಹೆಮ್ಮೆಯಿಂದ ಹಂಚಿಕೊಂಡರು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page