;
top of page

ಮಂಗಳೂರು ರೈಲ್ವೆ ವಲಯದಲ್ಲಿ ಬೃಹತ್ ಅಭಿವೃದ್ಧಿ: ಸಚಿವ ವಿ. ಸೋಮಣ್ಣ

May 24
1 min read

ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದಲ್ಲೇ ಪ್ರಯಾಣಿಕರ ಅನುಕೂಲಕ್ಕಾಗಿ ಹೊಸ ರೈಲು ನಿಲ್ದಾಣ ನಿರ್ಮಿಸಲು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ಸಂಸದ ಬ್ರಿಜೇಶ್ ಚೌಟ ಅವರ ಪ್ರಸ್ತಾವನೆಯಂತೆ ಈ ಯೋಜನೆಯ ಅಧ್ಯಯನ ಆರಂಭವಾಗಿದೆ.

ಇದೇ ವೇಳೆ ಕರಾವಳಿ ಜನರ ಬಹುದಿನಗಳ ಕನಸಾದ ಮಂಗಳೂರು–ಬೆಂಗಳೂರು 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲು ಸಂಚಾರ ಇನ್ನು ಒಂದು ತಿಂಗಳೊಳಗೆ ಅಧಿಕೃತವಾಗಿ ಪ್ರಾರಂಭವಾಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ಹಾಸನ-ಮಂಗಳೂರು ಘಾಟ್ ಮಾರ್ಗದ ವಿದ್ಯುದೀಕರಣ ಪೂರ್ಣಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಹೈಸ್ಪೀಡ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಇದು ಎಲ್ಲ ಪ್ರಮುಖ ನಿಲ್ದಾಣಗಳಲ್ಲಿ ನಿಲ್ಲಲಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page