;
top of page

ಮಂಗಳೂರು: ಕತ್ತಿ ಹಿಡಿದು ದಾಳಿ ಮಾಡಲು ಯತ್ನಿಸಿದ ವ್ಯಕ್ತಿಯ ಬಂಧನ

  • Apr 25
  • 1 min read

ಮಂಗಳೂರಿನ ವಾಮಂಜೂರು ನಿವಾಸಿ ನವೀನ್ ಎಂಬಾತ ಕತ್ತಿ ಹಿಡಿದು ಮನೆಗೆ ನುಗ್ಗಿ ದಾಳಿ ನಡೆಸಲು ಯತ್ನಿಸಿದ ಘಟನೆ ನಡೆದಿದೆ. ಪತ್ನಿಯೊಂದಿಗೆ ವಿಚ್ಛೇದನ ಪಡೆದಿದ್ದ ನವೀನ್, ಈ ದ್ವೇಷದ ಹಿನ್ನೆಲೆಯಲ್ಲಿ ಕಲಾವರ್ ನಿವಾಸಿ ದೇವಿ ಪ್ರಸಾದ್ ಅವರ ಮನೆಗೆ ತೆರಳಿ ಅವರ ಪೋಷಕರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ದೇವಿ ಪ್ರಸಾದ್ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದರು.

ಈ ವೇಳೆ ಪರಾರಿಯಾಗಲು ಯತ್ನಿಸಿದ ನವೀನ್ ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದು, ಕೂಡಲೇ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಐಪಿಸಿ 307 ಹಾಗೂ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಬಂಧಿತ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲು ಕ್ರಮ ಕೈಗೊಂಡಿದ್ದಾರೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page