ಮದರಂಗಿ ಕಾರ್ಯಕ್ರಮದಲ್ಲಿ ದುರಂತ: ವೇದಿಕೆಯಲ್ಲೇ ಕುಸಿದು ಬಿದ್ದು ಯುವ ನಿರೂಪಕ ಸಾವು
- Apr 11
- 1 min read

ಬಂಟ್ವಾಳದ ನರಿಕೊಂಬು ಗ್ರಾಮದ ನಾಯಿಲದಲ್ಲಿ ನಡೆದ ಮದರಂಗಿ ಕಾರ್ಯಕ್ರಮವೊಂದರಲ್ಲಿ ನಿರೂಪಣೆ ಮಾಡುತ್ತಿದ್ದ ಅಶ್ವಥ್ (32) ಎಂಬ ಯುವಕ ಹಠಾತ್ ಸಾವನ್ನಪ್ಪಿದ್ದಾರೆ. ಫರಂಗಿಪೇಟೆ ನಿವಾಸಿಯಾದ ಇವರು ವೇದಿಕೆ ಏರಿ ಕಾರ್ಯಕ್ರಮ ಆರಂಭಿಸುತ್ತಿದ್ದಂತೆಯೇ ಕುಸಿದು ಬಿದ್ದಿದ್ದಾರೆ. ಈ ಆಕಸ್ಮಿಕ ಘಟನೆಯು ಸಂಭ್ರಮದ ಮನೆಯಲ್ಲಿ ಮೌನ ಆವರಿಸುವಂತೆ ಮಾಡಿದೆ.

ತಕ್ಷಣವೇ ಅವರನ್ನು ತುಂಬೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ಹೃದಯಾಘಾತದಿಂದ ಈ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿರಿಯ ವಯಸ್ಸಿನಲ್ಲೇ ನಿರೂಪಕ ಸಾವನ್ನಪ್ಪಿರುವುದು ಸ್ಥಳೀಯರಲ್ಲಿ ತೀವ್ರ ಶೋಕ ತಂದಿದೆ.







Comments