ಸಚಿವ ಮುನಿಯಪ್ಪರನ್ನು ಭೇಟಿ ಮಾಡಿದ ಭೋವಿ ಯುವ ಮುಖಂಡ ಪವನ್ ಕುಮಾರ್ ಶಿರ್ವ; ಜಿಲ್ಲೆಯ ಸಮಸ್ಯೆ, ಹಲವು ಬೇಡಿಕೆಗಳ ಕುರಿತು ಚರ್ಚೆ

ಮಂಗಳೂರು: ಕರ್ನಾಟಕ ಸರ್ಕಾರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಮುನಿಯಪ್ಪ ಅವರನ್ನು ಭೋವಿ ಯುವ ಮುಖಂಡ ಪವನ್ ಕುಮಾರ್ ಶಿರ್ವ ಅವರು ಇಂದು ಮಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಭೇಟಿ ಮಾಡಿದರು.
ಈ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳು ಹಾಗೂ ಸ್ಥಳೀಯವಾಗಿ ಗಮನಹರಿಸಬೇಕಾದ ಹಲವು ವಿಚಾರಗಳ ಕುರಿತು ಸಚಿವರೊಂದಿಗೆ ಚರ್ಚೆ ನಡೆಸಲಾಯಿತು. ಜೊತೆಗೆ ಸಮುದಾಯಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಸಚಿವರ ಮುಂದಿಟ್ಟು, ಅವುಗಳ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.
ಭೇಟಿಯ ಸಂದರ್ಭದಲ್ಲಿ ಜಿಲ್ಲೆಯ ಜನರು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅಭಿವೃದ್ಧಿಗೆ ಸಂಬಂಧಿಸಿದ ಹಲವು ವಿಷಯಗಳ ಕುರಿತು ಚರ್ಚೆ ನಡೆದಿದೆ ಎಂದು ಪವನ್ ಕುಮಾರ್ ಶಿರ್ವ ತಿಳಿಸಿದ್ದಾರೆ.







Comments