ಇನ್ಮುಂದೆ ಆನ್ಲೈನ್ನಲ್ಲೇ ವಂಶವೃಕ್ಷ: ಸರ್ಕಾರದ ಹೊಸ ನಿಯಮ ಜಾರಿ

ಕರ್ನಾಟಕ ಸರ್ಕಾರವು ವಂಶವೃಕ್ಷ ದೃಢೀಕರಣ ಪತ್ರ ನೀಡುವಿಕೆಗೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಏಕೀಕೃತ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಇನ್ನು ಮುಂದೆ ವಂಶವೃಕ್ಷ ದೃಢೀಕರಣ ಪತ್ರವನ್ನು ಕೇವಲ ಆನ್ಲೈನ್ ತಂತ್ರಾಂಶದ ಮೂಲಕ ಮಾತ್ರ ವಿತರಿಸಲು ಕಡ್ಡಾಯಗೊಳಿಸಲಾಗಿದೆ.
ಅರ್ಜಿದಾರರು ಕಡ್ಡಾಯವಾಗಿ 100 ರೂ. ಛಾಪಾ ಕಾಗದದ ನೋಟರಿ ದೃಢೀಕೃತ ಅಫಿಡವಿಟ್, ಆಧಾರ್ ಕಾರ್ಡ್ ಹಾಗೂ ಕುಟುಂಬದ ಸದಸ್ಯರ ಗುರುತಿನ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಕೆಯಾದ ನಂತರ ಗ್ರಾಮ ಆಡಳಿತ ಅಧಿಕಾರಿಗಳು ಮನೆಗೆ ಭೇಟಿ ನೀಡಿ ದಾಖಲೆ ಪರಿಶೀಲಿಸಿ, ರಾಜಸ್ವ ನಿರೀಕ್ಷಕರಿಗೆ ಶಿಫಾರಸು ಮಾಡಲಿದ್ದಾರೆ.
ಕೊನೆಯದಾಗಿ ರಾಜಸ್ವ ನಿರೀಕ್ಷಕರ ವರದಿಯನ್ನು ಪರಿಶೀಲಿಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಉಪ ತಹಶೀಲ್ದಾರರಿಗೆ ನೀಡಲಾಗಿದೆ. ಅನುಮೋದನೆಗೊಂಡ ಪತ್ರಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸಲಾಗುವುದು.







Comments