ಪುತ್ತೂರು: ಕುಮಾರಧಾರ ನದಿ ಪ್ರವಾಹಕ್ಕೆ ಮುಳುಗಿದ ಮಹಾಲಿಂಗೇಶ್ವರ ದೇವರ ಸ್ನಾನದ ಕಟ್ಟೆ

ಕಳೆದ ಎರಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರೀ ಮಳೆಗೆ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ. ಇದರ ಪರಿಣಾಮವಾಗಿ ವೀರಮಂಗಲದಲ್ಲಿರುವ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಅವಭೃತ ಸ್ನಾನದ ಕಟ್ಟೆ ಸಂಪೂರ್ಣ ಜಲಾವೃತಗೊಂಡಿದೆ.

ನದಿಯ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ತೀರದ ಪಕ್ಕದಲ್ಲಿರುವ ಕೆಲವು ತೋಟಗಳಿಗೂ ಪ್ರವಾಹದ ನೀರು ನುಗ್ಗಿದೆ. ಇದು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ಕೃಷಿಕರು ಸಂಕಷ್ಟಕ್ಕೆ ಸಿಲುಕುವಂತಾಗಿದೆ.
ಮಳೆ ಮುಂದುವರಿದರೆ ನೀರಿನ ಮಟ್ಟ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಆದ್ದರಿಂದ ನದಿ ತೀರದ ನಿವಾಸಿಗಳು ಹಾಗೂ ಭಕ್ತರು ಅನಗತ್ಯವಾಗಿ ನದಿಯ ಬಳಿ ತೆರಳದಂತೆ ಸೂಚಿಸಲಾಗಿದೆ. ತಾಲೂಕು ಆಡಳಿತವು ಪರಿಸ್ಥಿತಿಯ ಮೇಲೆ ನಿರಂತರ ನಿಗಾ ವಹಿಸಿದೆ.







Comments