;
top of page

​‘ಬುದ್ಧಿವಂತರ ಜಿಲ್ಲೆಗೆ ಕೆಟ್ಟ ಹೆಸರು ತರಬೇಡಿ’: ಪುತ್ತೂರು ಶಾಂತಿ ಸಭೆಯಲ್ಲಿ ಎಸಿ ಸ್ಟೆಲ್ಲಾ ವರ್ಗೀಸ್ ಕರೆ

Aug 24
1 min read

ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಪ್ರಕರಣಗಳನ್ನು ದಾಖಲಿಸಿಕೊಂಡು ಅತ್ಯಂತ ನಿಷ್ಪಕ್ಷಪಾತ ಹಾಗೂ ಪಾರದರ್ಶಕ ತನಿಖೆ ನಡೆಸುತ್ತಿದೆ ಎಂದು ಪುತ್ತೂರು ಡಿವೈಎಸ್ಪಿ ಪ್ರಮೋದ್ ಕುಮಾರ್ ತಿಳಿಸಿದ್ದಾರೆ. ಪುತ್ತೂರು ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆಯ ವತಿಯಿಂದ ಕೋ-ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು. ಹಬ್ಬಗಳ ಸಂದರ್ಭದಲ್ಲಿ ಮನಸ್ಸಿನಲ್ಲಿ ಯಾವುದೇ ದ್ವೇಷವಿಟ್ಟುಕೊಳ್ಳದೆ, ಎಲ್ಲರೂ ಕಾನೂನಿನ ಮೇಲೆ ನಂಬಿಕೆಯಿಟ್ಟು ಶಾಂತಿ ಮತ್ತು ಸೌಹಾರ್ದತೆಯಿಂದ ಆಚರಿಸಬೇಕು ಎಂದು ಅವರು ಕರೆ ನೀಡಿದರು.

ಇತ್ತೀಚಿನ ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ ವಿವಿಧ ಸಂಘಟನೆಗಳ ಪ್ರಮುಖರು ಮತ್ತು ಸಾರ್ವಜನಿಕರ ಅಭಿಪ್ರಾಯ ಪಡೆಯಲು ಈ ಸಭೆ ಕರೆಯಲಾಗಿತ್ತು. ಪ್ರಕರಣದ ಸಂಪೂರ್ಣ ಮಾಹಿತಿ ಸಂಗ್ರಹಿಸಿ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಹಾಗೂ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು. ಸಭೆಯ ಅಧ್ಯಕ್ಷತೆ ವಹಿಸಿದ್ದ ಅಧಿಕಾರಿಗಳು, ಕಾನೂನುಬದ್ಧವಾಗಿ ಹಾಗೂ ಸಮಾಜಕ್ಕೆ ಶುಭ ಸಂದೇಶ ನೀಡುವ ರೀತಿಯಲ್ಲಿ ಹಬ್ಬಗಳನ್ನು ಆಚರಿಸಲು ಇಲಾಖೆಯು ಸಂಪೂರ್ಣ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಪುತ್ತೂರು ಸಹಾಯಕ ಕಮೀಷನರ್ ಸ್ಟೆಲ್ಲಾ ವರ್ಗೀಸ್ ಮಾತನಾಡಿ, ‘ಬುದ್ಧಿವಂತರ ಜಿಲ್ಲೆ’ ಎಂಬ ಹೆಸರಿರುವ ದಕ್ಷಿಣ ಕನ್ನಡವು ಇಂತಹ ಅಹಿತಕರ ವಿಚಾರಗಳಿಂದ ಪ್ರಚಾರ ಪಡೆಯಬಾರದು, ಪ್ರತಿಯೊಬ್ಬರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದರು. ತಹಶೀಲ್ದಾರ್ ಎಸ್.ಬಿ. ಕೂಡಲಗಿ ಪ್ರೀತಿ-ವಿಶ್ವಾಸದಿಂದ ಹಬ್ಬ ಆಚರಿಸಲು ಕೋರಿದರು. ಈ ಸಂದರ್ಭದಲ್ಲಿ ವಿವಿಧ ಸಂಘಟನೆಗಳ ಮುಖಂಡರು ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು. ನಗರ ಠಾಣೆ, ಮಹಿಳಾ ಠಾಣೆ ಹಾಗೂ ಸಂಚಾರ ಠಾಣೆಯ ಪೊಲೀಸ್ ನಿರೀಕ್ಷಕರು ಸಭೆಯಲ್ಲಿ ಉಪಸ್ಥಿತರಿದ್ದರು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page