ರಾಜ್ಯದ 17 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್: ಗುಡುಗು ಸಹಿತ ಮಳೆ ಮುನ್ಸೂಚನೆ
- Mar 30
- 1 min read

ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆ ಮುಂದುವರಿದಿದ್ದು, ಇಂದು ಬೆಂಗಳೂರು ಸೇರಿದಂತೆ 17 ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಗಾಳಿ ಹಾಗೂ ಮಿಂಚಿನ ಆರ್ಭಟ ಇರಲಿದ್ದು, ಕರಾವಳಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಹೆಚ್ಚಿರಲಿದೆ ಎಂದು ತಿಳಿದುಬಂದಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಮೈಸೂರು ಮತ್ತು ಬೆಂಗಳೂರಿನಲ್ಲೂ ಮಳೆ ಸುರಿಯುವ ಮುನ್ಸೂಚನೆ ಇದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ಬಿತ್ತನೆ ಕಾರ್ಯದಲ್ಲಿರುವ ರೈತರಿಗೆ ಈ ಮಳೆ ಪೂರಕವಾಗಿದ್ದರೂ, ಸಿಡಿಲಿನ ಬಗ್ಗೆ ಜಾಗರೂಕತೆ ವಹಿಸುವುದು ಅವಶ್ಯಕವಾಗಿದೆ.







Comments