;
top of page

ರಸ್ತೆ ಅಪಘಾತ: ಗಾಯಾಳು ರಕ್ಷಿಸಿದರೆ ಸಿಗಲಿದೆ ₹25 ಸಾವಿರ ಬಹುಮಾನ!

  • Jun 11
  • 1 min read

ರಸ್ತೆ ಅಪಘಾತಕ್ಕೊಳಗಾದವರನ್ನು ಸಕಾಲದಲ್ಲಿ ಆಸ್ಪತ್ರೆಗೆ ಸೇರಿಸಿ ನೆರವು ನೀಡುವವರಿಗಾಗಿ ಕೇಂದ್ರ ಸರ್ಕಾರ 'ರಹಾ-ವೀರ್' ಯೋಜನೆ ಜಾರಿಗೆ ತಂದಿದೆ. ಇದರ ಅಡಿಯಲ್ಲಿ ಜೀವ ಉಳಿಸಿದವರಿಗೆ 25 ಸಾವಿರ ರೂಪಾಯಿ ನಗದು ಬಹುಮಾನ ಹಾಗೂ ಕಾನೂನಿನ ರಕ್ಷಣೆ ಸಿಗಲಿದೆ.

ಅಪಘಾತ ಸಂಭವಿಸಿದ ಮೊದಲ ಒಂದು ಗಂಟೆಯನ್ನು 'ಗೋಲ್ಡನ್ ಅವರ್' ಎನ್ನಲಾಗುತ್ತದೆ. ಈ ಅವಧಿಯಲ್ಲಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಿದರೆ ಪ್ರಾಣ ಉಳಿಸಬಹುದು. ಇದಕ್ಕೆ ಯಾವುದೇ ವೈದ್ಯಕೀಯ ತರಬೇತಿ ಬೇಡ, ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿಸಿದರೆ ಸಾಕು.

ಪೊಲೀಸ್ ಕಿರಿಕಿರಿ ಹಾಗೂ ಕೋರ್ಟ್ ಅಲೆದಾಟದ ಭಯದಿಂದ ಜನ ಸಹಾಯ ಮಾಡಲು ಹಿಂಜರಿಯುತ್ತಿದ್ದಾರೆ. ಈ ಭಯವನ್ನು ಹೋಗಲಾಡಿಸಿ, ಅಪಘಾತಗಳಿಂದ ದೇಶದ ಜಿಡಿಪಿಗೆ ಆಗುತ್ತಿರುವ ಶೇ.3ರಷ್ಟು ನಷ್ಟವನ್ನು ತಪ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page