;
top of page

ದ.ಕನ್ನಡ: ಎಸ್‌ಎಸ್‌ಐ ಕೊಲೆ ಯತ್ನ ಪ್ರಕರಣ – ಅಪರಾಧಿಗೆ 7 ವರ್ಷಗಳ ಕಠಿಣ ಶಿಕ್ಷೆ

  • Apr 28
  • 1 min read

ಮಂಗಳೂರು: ಉರ್ವ ಪೊಲೀಸ್ ಠಾಣೆಯಲ್ಲಿ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾಗಿದ್ದ ಐತ್ತಪ್ಪ ಅವರ ಮೇಲೆ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಅಪರಾಧಿಗೆ ನ್ಯಾಯಾಲಯವು ಕಠಿಣ ಶಿಕ್ಷೆ ವಿಧಿಸಿದೆ.

ಈ ಪ್ರಕರಣವನ್ನು ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಎಫ್‌ಟಿಎಸ್‌ಸಿ-1 (ತ್ವರಿತಗತಿ ನ್ಯಾಯಾಲಯ)ವು, ಸುರತ್ಕಲ್‌ ನಿವಾಸಿ ಮಹಮ್ಮದ್ ನಿಯಾಜ್‌ (29) ಅಪರಾಧಿ ಎಂದು ತೀರ್ಮಾನಿಸಿ, 7 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹50,000 ದಂಡ ವಿಧಿಸಿ ಸೋಮವಾರ (ಏ.27) ತೀರ್ಪು ನೀಡಿದೆ.

ನ್ಯಾಯಾಧೀಶ ಮೋಹನ ಜೆ.ಎಸ್‌. ಅವರು ಪ್ರಕರಣದ ಸಾಕ್ಷ್ಯಾಧಾರಗಳು, ದಾಖಲೆಗಳು ಮತ್ತು ವಾದಗಳನ್ನು ಪರಿಶೀಲಿಸಿದ ಬಳಿಕ, ದ್ವಿತೀಯ ಆರೋಪಿ ಮಹಮ್ಮದ್ ನಿಯಾಜ್ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ಘೋಷಿಸಿದರು.

ಇನ್ನು ವಿಧಿಸಲಾದ ₹50,000 ದಂಡದ ಮೊತ್ತದಲ್ಲಿ ₹45,000 ಹಣವನ್ನು ಗಾಯಗೊಂಡ ಸಹಾಯಕ ಉಪನಿರೀಕ್ಷಕರಿಗೆ ಪರಿಹಾರವಾಗಿ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ಈ ಪ್ರಕರಣದಲ್ಲಿ ಮೊದಲ ಆರೋಪಿ ಶಮೀರ್‌ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ವಿಚಾರಣೆ ಇನ್ನೂ ಬಾಕಿ ಉಳಿದಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page