ಉಪನ್ಯಾಸಕಿಯ ಅವಮಾನಕ್ಕೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ: ಡೆತ್ ನೋಟ್ ಪತ್ತೆ
- 4 days ago
- 1 min read

ಸಹಪಾಠಿಗಳ ಮುಂದೆ ಉಪನ್ಯಾಸಕಿಯೊಬ್ಬರು ಅವಮಾನ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ಗೌತಮಿ ಎಂಬಾಕೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಏಪ್ರಿಲ್ 4ರಂದು ಈ ಘಟನೆ ನಡೆದಿದ್ದು, ಸುಭಾಷನಗರದ ತನ್ನ ಮನೆಯಲ್ಲಿ ಗೌತಮಿ ಪ್ರಾಣ ಕಳೆದುಕೊಂಡಿದ್ದಾಳೆ. ಆರಂಭದಲ್ಲಿ ಮಾನಸಿಕ ಖಿನ್ನತೆಯಿಂದ ಮಗಳು ಈ ಹಂತಕ್ಕೆ ಹೋಗಿರಬಹುದು ಎಂದು ಪೋಷಕರು ಭಾವಿಸಿದ್ದರು. ಆದರೆ, ಇತ್ತೀಚೆಗೆ ಆಕೆಯ ಕೊಠಡಿಯಲ್ಲಿ ಸಿಕ್ಕ ಡೆತ್ ನೋಟ್ ಸಾವಿನ ಹಿಂದಿನ ಅಸಲಿ ಕಾರಣವನ್ನು ಬಯಲು ಮಾಡಿದೆ.

ಗೌತಮಿಯ ತಂದೆ ಸೋಮಶೇಖರಯ್ಯ ಕಚೇರಿಯಿಂದ ಮನೆಗೆ ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಡೆತ್ ನೋಟ್ನಲ್ಲಿ ಉಪನ್ಯಾಸಕಿಯ ಕಿರುಕುಳದ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ, ಪೋಷಕರು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ವಿದ್ಯಾರ್ಥಿನಿಯ ಅಕಾಲಿಕ ಸಾವು ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.







Comments