ಭ್ರಷ್ಟಾಚಾರ ಮುಕ್ತ ತಮಿಳುನಾಡು: ಕರೂರ್ನಲ್ಲಿ ಕಟ್ಟುನಿಟ್ಟಿನ ಸಂದೇಶ ರವಾನಿಸಿದ ಸಿಎಂ ವಿಜಯ್
- 5 days ago
- 1 min read

ತಮಿಳುನಾಡಿನ ಕರೂರ್ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ವಿಜಯ್ ಅವರು ಲಂಚ ಮತ್ತು ಭ್ರಷ್ಟಾಚಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಯಾವುದೇ ಕಾರಣಕ್ಕೂ ಯಾರದೇ ಒತ್ತಡಕ್ಕೂ ಮಣಿಯದೆ ಸಾರ್ವಜನಿಕರು ಲಂಚ ನೀಡುವುದನ್ನು ಕಟ್ಟುನಿಟ್ಟಾಗಿ ನಿರಾಕರಿಸಬೇಕು ಎಂದು ಅವರು ಕರೆ ನೀಡಿದರು. ಭ್ರಷ್ಟಾಚಾರದ ವಿರುದ್ಧ ಧ್ವನಿ ಎತ್ತುವ ಪ್ರತಿಯೊಬ್ಬ ನಾಗರಿಕನ ಪರವಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ತಾವೂ ಸಂಪೂರ್ಣ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು.
ತಮ್ಮ 55 ದಿನಗಳ ಆಡಳಿತ ಅವಧಿಯಲ್ಲಿ ತಂದಿರುವ ಆಡಳಿತಾತ್ಮಕ ಬದಲಾವಣೆಗಳನ್ನು ಪಟ್ಟಿ ಮಾಡಿದ ಸಿಎಂ, ಭ್ರಷ್ಟಾಚಾರ ನಮ್ಮ ರಕ್ತದಲ್ಲೇ ಸೇರಿದೆ ಎನ್ನುವವರ ವಾದ ತಪ್ಪು ಎಂಬುದನ್ನು ಸಾಬೀತುಪಡಿಸಿದ್ದೇವೆ ಎಂದರು. ಪ್ರಸ್ತುತ ಸರ್ಕಾರಿ ಕಚೇರಿಗಳಲ್ಲಿ ಯಾವುದೇ ಲಂಚವಿಲ್ಲದೆ ಸಾರ್ವಜನಿಕ ಕೆಲಸಗಳು ಅತ್ಯಂತ ವೇಗವಾಗಿ ನಡೆಯುತ್ತಿವೆ ಎಂದು ಅವರು ಪ್ರತಿಪಾದಿಸಿದರು.
ಇದೇ ವೇಳೆ, ಇತ್ತೀಚೆಗೆ ಸರ್ಕಾರಿ ಕಚೇರಿಗೆ ಭೇಟಿ ನೀಡಿದ್ದ ವೃದ್ಧರೊಬ್ಬರು ಅಲ್ಲಿನ ಅಧಿಕಾರಿಗಳು ತಮಗೆ ನೀಡಿದ ಗೌರವ ಮತ್ತು ಸೂಕ್ತ ಆಸನದ ವ್ಯವಸ್ಥೆಯನ್ನು ಕೊಂಡಾಡಿದ್ದನ್ನು ಮುಖ್ಯಮಂತ್ರಿಗಳು ಸಭೆಯಲ್ಲಿ ನೆನಪಿಸಿಕೊಂಡರು. ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸುತ್ತಿರುವ ಅಧಿಕಾರಿಗಳ ಬದಲಾದ ಧೋರಣೆಯನ್ನು ಅವರು ಮುಕ್ತಕಂಠದಿಂದ ಶ್ಲಾಘಿಸಿದರು.







Comments