ಯು.ಟಿ. ಖಾದರ್ಗೆ ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳ ಉಸ್ತುವಾರಿ ಜವಾಬ್ದಾರಿ
- Jun 25
- 1 min read

ಮಂಗಳೂರು ಶಾಸಕ ಹಾಗೂ ಪ್ರಸ್ತುತ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿರುವ ಯು.ಟಿ. ಖಾದರ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸ್ಥಾನವನ್ನು ನೀಡಿ ಆದೇಶ ಹೊರಡಿಸಲಾಗಿದೆ. ಸಿದ್ದರಾಮಯ್ಯ ನೇತೃತ್ವದ ಈ ಹಿಂದಿನ ಸರ್ಕಾರದಲ್ಲಿ ಸ್ಪೀಕರ್ ಆಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಖಾದರ್ ಅವರಿಗೆ ಈಗ ಮಹತ್ವದ ಜವಾಬ್ದಾರಿ ಸಿಕ್ಕಿದೆ.
ಸದ್ಯಕ್ಕೆ ಜಿಲ್ಲೆಯಲ್ಲಿ ಎದುರಾಗಿರುವ ಪ್ರಕೃತಿ ವಿಕೋಪದ ಸಮರ್ಥ ನಿರ್ವಹಣೆಗಾಗಿ ಮಾತ್ರ ಈ ಉಸ್ತುವಾರಿ ಜವಾಬ್ದಾರಿಯನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಗಳಿಗೆ ಪೂರ್ಣ ಪ್ರಮಾಣದ ಉಸ್ತುವಾರಿ ಸಚಿವರ ಸ್ಥಾನದ ಮರು ಹಂಚಿಕೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ದಕ್ಷಿಣ ಕನ್ನಡದ ಜೊತೆಗೆ ನೆರೆಹೊರೆಯ ಜಿಲ್ಲೆಗಳಾದ ಕೊಡಗು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಉಸ್ತುವಾರಿ ಸಚಿವರನ್ನಾಗಿಯೂ ಯು.ಟಿ. ಖಾದರ್ ಅವರನ್ನು ನೇಮಕ ಮಾಡಲಾಗಿದ್ದು, ವಿಕೋಪ ನಿರ್ವಹಣೆಗೆ ಸರ್ಕಾರ ಆದ್ಯತೆ ನೀಡಿದೆ.







Comments