ಉಳ್ಳಾಲ: ವಿದ್ಯುತ್ ಆಘಾತದಿಂದ ಮೆಸ್ಕಾಂ ಲೈನ್ಮೆನ್ ದುರಂತ ಸಾವು

ಉಳ್ಳಾಲ ತಾಲೂಕಿನ ಉಚ್ಚಿಲ ನಯಾಪಟ್ಟಣದಲ್ಲಿ ಇಂದು ಬೆಳಿಗ್ಗೆ ಟ್ರಾನ್ಸ್ಫಾರ್ಮರ್ ದುರಸ್ತಿ ವೇಳೆ ವಿದ್ಯುತ್ ಆಘಾತಕ್ಕೊಳಗಾಗಿ ಮೆಸ್ಕಾಂ ಲೈನ್ಮೆನ್ ಮೃತಪಟ್ಟಿದ್ದಾರೆ. ಅಂಬಿಕಾರೋಡ್ ಪಿಲಾರು ನಿವಾಸಿ ಶೇಖ್ ಝಮೀರ್ (49) ಮೃತಪಟ್ಟ ದೌರ್ಭಾಗ್ಯಕರ ವ್ಯಕ್ತಿಯಾಗಿದ್ದಾರೆ.

ಟ್ರಾನ್ಸ್ಫಾರ್ಮರ್ನಲ್ಲಿದ್ದ ದೋಷ ಸರಿಪಡಿಸಲು ಬಂದಿದ್ದ ಝಮೀರ್, ಜಿಒಎಸ್ (ಗ್ರೂಪ್ ಆಪರೇಟೆಡ್ ಸ್ವಿಚ್) ಆಫ್ ಆಗಿದೆಯೆಂದು ಭಾವಿಸಿ ಟಿಸಿ ಏರಿದ್ದರು. ಈ ವೇಳೆ ವಿದ್ಯುತ್ ಸ್ಪರ್ಶಿಸಿ ಕೆಳಗೆ ಬಿದ್ದ ಅವರನ್ನು ಆಸ್ಪತ್ರೆಗೆ ಒಯ್ಯುವಾಗ ದಾರಿ ಮಧ್ಯೆ ಕೊನೆಯುಸಿರೆಳೆದರು.
ಮೃತ ಶೇಖ್ ಝಮೀರ್ ಅವರು ಪತ್ನಿ ಹಾಗೂ ಓರ್ವ ಹೆಣ್ಣುಮಗಳನ್ನು ಅಗಲಿದ್ದಾರೆ. ಈ ಘಟನೆಯು ಸ್ಥಳೀಯವಾಗಿ ತೀವ್ರ ಶೋಕ ವಾತಾವರಣವನ್ನು ನಿರ್ಮಿಸಿದೆ.







Comments