;
top of page

ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ಪತ್ತೆ; ಲಾರಿ ಸಮೇತ ಚಾಲಕನ ಬಂಧನ

  • Writer: sathyapathanewsplu
    sathyapathanewsplu
  • Jan 3
  • 1 min read

ನೆಲ್ಯಾಡಿ: ಯಾವುದೇ ಅಧಿಕೃತ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಉಪ್ಪಿನಂಗಡಿ ವಲಯ ಅರಣ್ಯ ಇಲಾಖಾಧಿಕಾರಿಗಳ ತಂಡ ಪತ್ತೆಹಚ್ಚಿದೆ. ಡಿಸೆಂಬರ್ 30ರಂದು ರಾತ್ರಿ ಈ ಕಾರ್ಯಾಚರಣೆ ನಡೆದಿದ್ದು, ಮರದ ದಿಮ್ಮಿಗಳು, ಲಾರಿ ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ರಾತ್ರಿ ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಈ ಅಕ್ರಮ ಬಯಲಾಗಿದೆ.



ಹಾಸನದ ಕಡೆಯಿಂದ ಬಂಟ್ವಾಳದತ್ತ ಸಾಗುತ್ತಿದ್ದ ಲಾರಿಯನ್ನು (KA 21, B 5787) ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಎಂಬಲ್ಲಿ ಅರಣ್ಯ ಅಧಿಕಾರಿಗಳು ಸಂಶಯದ ಮೇರೆಗೆ ತಡೆದು ಪರಿಶೀಲಿಸಿದ್ದಾರೆ. ಈ ವೇಳೆ ಲಾರಿಯಲ್ಲಿ ವಿವಿಧ ಕಾಡು ಜಾತಿಗೆ ಸೇರಿದ ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿರುವುದು ದೃಢಪಟ್ಟಿದೆ. ಮರ ಸಾಗಾಟಕ್ಕೆ ಸಂಬಂಧಿಸಿದಂತೆ ಯಾವುದೇ ಕಾನೂನುಬದ್ಧ ದಾಖಲೆಗಳು ಇಲ್ಲದ ಕಾರಣ, ಸಕಲೇಶಪುರ ಮೂಲದ ಚಾಲಕ ಕಾಂತ ಎಚ್.ಎಸ್. (48 ವರ್ಷ) ಎಂಬವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಉಪವಲಯ ಅರಣ್ಯಾಧಿಕಾರಿ ಯತೀಂದ್ರ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಗಸ್ತು ವನಪಾಲಕರಾದ ವಿನಯಚಂದ್ರ, ಶಿವಾನಂದ ಕುದ್ರಿ, ವಾಹನ ಚಾಲಕ ಕಿಶೋರ್ ಹಾಗೂ ದಿನಕೂಲಿ ನೌಕರ ದಿನೇಶ್ ಅವರು ಭಾಗವಹಿಸಿದ್ದರು. ಜಪ್ತಿ ಮಾಡಲಾದ ಲಾರಿ ಮತ್ತು ಮರದ ದಿಮ್ಮಿಗಳನ್ನು ಅರಣ್ಯ ಇಲಾಖೆಯ ವಶಕ್ಕೆ ನೀಡಲಾಗಿದ್ದು, ಆರೋಪಿಯ ವಿರುದ್ಧ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page