;
top of page

ಯಶವಂತಪುರ-ಮಂಗಳೂರು ವಂದೇ ಭಾರತ್ 2ನೇ ಪ್ರಾಯೋಗಿಕ ಸಂಚಾರ: ಕಬಕ ಪುತ್ತೂರಿನಲ್ಲೂ ನಿಲುಗಡೆ

5 days ago
1 min read

ಮಂಗಳೂರು: ಯಶವಂತಪುರ ಹಾಗೂ ಮಂಗಳೂರು ಜಂಕ್ಷನ್ ನಡುವೆ ಪ್ರಸ್ತಾವಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ 16 ಬೋಗಿಗಳ 2ನೇ ಪ್ರಾಯೋಗಿಕ ಸಂಚಾರ ಗುರುವಾರ ನಡೆಯಲಿದೆ.

ರೈಲ್ವೆ ಮಂಡಳಿಯ ಸೂಚನೆಯಂತೆ ಈ ಖಾಲಿ ರೈಲಿನ ಪ್ರಯೋಗಾರ್ಥ ಸಂಚಾರ ನಡೆಯಲಿದ್ದು, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರಸ್ತೆ ಹಾಗೂ ಪಡೀಲು ನಿಲ್ದಾಣಗಳ ಜೊತೆಗೆ ಈ ಬಾರಿ ಕಬಕ ಪುತ್ತೂರು ನಿಲ್ದಾಣದಲ್ಲೂ ನಿಲುಗಡೆ ನೀಡಲಾಗಿದೆ. ಯಶವಂತಪುರದಿಂದ ಬೆಳಿಗ್ಗೆ 6.50ಕ್ಕೆ ಹೊರಡುವ ರೈಲು ಮಧ್ಯಾಹ್ನ 2.50ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಮರಳಿ ಮಧ್ಯಾಹ್ನ 3.10ಕ್ಕೆ ಹೊರಟು ರಾತ್ರಿ 10.30ಕ್ಕೆ ಯಶವಂತಪುರ ತಲುಪುವ ನಿರೀಕ್ಷೆಯಿದೆ. ಈ ವೇಳೆ ತಾಂತ್ರಿಕ ತಂಡವು ಕಡಿದಾದ ಘಾಟ್ ವಿಭಾಗದಲ್ಲಿ ರೈಲಿನ ವೇಗ ಮತ್ತು ಸಂಚಾರ ಸಮಯವನ್ನು ಪರಿಶೀಲಿಸಿ ವರದಿ ಸಲ್ಲಿಸಲಿದೆ.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page