;
top of page

'ವಂದೇ ಮಾತರಂ ಗೀತೆಗೆ ಅವಮಾನ ಮಾಡುವುದು ಕ್ರಿಮಿನಲ್ ಅಪರಾಧ- ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರ

Jul 30
1 min read

ರಾಷ್ಟ್ರೀಯ ಗೀತೆಯಾದ ‘ವಂದೇ ಮಾತರಂ’ಗೆ ಉಂಟಾಗುವ ಅವಮಾನವನ್ನು ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವ ‘ರಾಷ್ಟ್ರೀಯ ಗೌರವಕ್ಕೆ ಅಪಮಾನ ತಡೆ (ತಿದ್ದುಪಡಿ) ವಿಧೇಯಕ – 2026’ ಅನ್ನು ರಾಜ್ಯಸಭೆಯು ಧ್ವನಿ ಮತದ ಮೂಲಕ ಅಂಗೀಕರಿಸಿದೆ. ರಾಷ್ಟ್ರಗೀತೆ ಜನಗಣಮನಗೆ ನೀಡಲಾಗುವ ಸಮಾನ ಗೌರವವನ್ನು ವಂದೇ ಮಾತರಂಗೂ ನೀಡಲು ಇದರಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.


ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮದ ಕುರಿತು ಗೃಹ ಸಚಿ

ವರ ಹೇಳಿಕೆಗೆ ಪಟ್ಟು ಹಿಡಿದ ವಿರೋಧ ಪಕ್ಷಗಳು ಸದನದಲ್ಲಿ ತೀವ್ರ ಗಲಾಟೆ ನಡೆಸಿದವು. ವಿಪಕ್ಷಗಳ ಈ ಪ್ರತಿಭಟನೆ ಮತ್ತು ಗದ್ದಲದ ನಡುವೆಯೂ ಉಪಸಭಾಪತಿ ಹರಿವಂಶ್ ಅವರು ಸದನದ ಕಲಾಪವನ್ನು ಮುಂದುವರಿಸಿದರು.

ಚರ್ಚೆಯ ವೇಳೆ ಕೇಂದ್ರ ಸಚಿವ ರಾಮದಾಸ್ ಅಥಾವಳೆ ಮಾತನಾಡುತ್ತಿದ್ದಾಗ ವಿಪಕ್ಷಗಳು ಕಲಾಪದಿಂದ ಹೊರನಡೆದವು. ವಿಧೇಯಕದ ಮೇಲಿನ ಚರ್ಚೆಗೆ ಉತ್ತರಿಸಿದ ಕೇಂದ್ರ ಗೃಹ ರಾಜ್ಯ ಸಚಿವ ನಿತ್ಯಾನಂದ ರೈ, ತುಷ್ಟೀಕರಣ ರಾಜಕಾರಣದ ಮೂಲಕ ಕಾಂಗ್ರೆಸ್ ದೇಶದ ಗೌರವಕ್ಕೆ ಧಕ್ಕೆ ತರುತ್ತಿದೆ ಎಂದು ನೇರವಾಗಿ ವಾಗ್ದಾಳಿ ನಡೆಸಿದರು.


Comments


ಜಾಹೀರಾತಿಗಾಗಿ ಸಂಪರ್ಕಿಸಿ:

ನಮ್ಮ ವೆಬ್‌ಸೈಟ್‌ನಲ್ಲಿ ನಿಮ್ಮ ವ್ಯವಹಾರ, ಸೇವೆ ಅಥವಾ ಉತ್ಪನ್ನವನ್ನು ಪ್ರಚಾರ ಮಾಡಲು ಬಯಸುವಿರಾ?

 ದಯವಿಟ್ಟು ಜಾಹೀರಾತಿಗಾಗಿ ಸಂಪರ್ಕಿಸಿ: 9880834166 / WhatsApp

Categories

Sathyapatha News Plus

Logo

"ಸತ್ಯಪಥ ನ್ಯೂಸ್ ಪ್ಲಸ್" – ರಾಜಕೀಯ ಸುದ್ದಿ, ಕ್ರೀಡೆಗಳ ತಾಜಾ ಅಪ್ಡೇಟ್‌ಗಳು, ಸ್ಥಳೀಯ ವರದಿಗಳು, ಮಾರುಕಟ್ಟೆ ಚಲನವಲನ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾಹಿತಿ – ಎಲ್ಲವನ್ನು ನಿಖರವಾಗಿ, ಸಮಯೋಚಿತವಾಗಿ, ನಿಮ್ಮ ಕೈಗೆ ತಲುಪಿಸುವ ವಿಶ್ವಾಸಾರ್ಹ ತಾಣ.

Popular Tags

Follow Us

  • Facebook
  • X
  • Youtube
  • Instagram
bottom of page